Wednesday, April 15, 2026
Wednesday, April 15, 2026

ಪಾಜಕ ಆನಂದತೀರ್ಥ ವಿದ್ಯಾಲಯ: ಏಐ ಲ್ಯಾಬ್ ಉದ್ಘಾಟನೆ

ಪಾಜಕ ಆನಂದತೀರ್ಥ ವಿದ್ಯಾಲಯ: ಏಐ ಲ್ಯಾಬ್ ಉದ್ಘಾಟನೆ

Date:

ಕಟಪಾಡಿ, ಡಿ.14: ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಲ್ಯಾಬ್ ಉದ್ಘಾಟನೆಯನ್ನು ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಸುಬ್ರಹ್ಮಣ್ಯ ಸಾಮಗ ನೆರವೇರಿಸಿದರು. ನಂತರ ಮಾತನಾಡಿದ ಅವರು, ಇಂದಿನ ಸ್ಪರ್ದಾತ್ಮಕ ಯುಗಕ್ಕೆ ಹೊಂದಿಕೊಂಡು ತಾಂತ್ರಿಕ ಶಿಕ್ಷಣದಲ್ಲಿ ಉನ್ನತ ಸ್ಥಾನ ಪಡೆಯಬೇಕಾದರೆ ಏಐ ತಂತ್ರಜ್ಞಾನದ ಅವಶ್ಯಕತೆ ಇಂದು ಅಗತ್ಯವಾಗಿದೆ. ಜಗತ್ತಿನ ಎಲ್ಲಾ ರಾಷ್ಟ್ರಗಳು ಈ ಏಐ ತಂತ್ರಜ್ಞಾನದಲ್ಲಿ ತೊಡಗಿಸಿಕೊಂಡು ಮುಂದಿನ ಎಲ್ಲಾ ವಿದ್ಯಮಾನಗಳಿಗೂ ಇದನ್ನೇ ಅವಲಂಬಿಸುವ ಕೆಲಸದಲ್ಲಿ ತೊಡಗಿವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ, ಭಾರತವೂ ಲಕ್ಷಾಂತರ ಕೋಟಿ ಹಣವನ್ನು ಇದಕ್ಕಾಗಿಯೇ ಮೀಸಲಿಡುತ್ತಿದೆ. ಮುಂದಿನ ಯುವ ಪೀಳಿಗೆಗೆ ಇದರಿಂದ ಮಹತ್ವದ ಸ್ಥಾನ ಸಿಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ನಾಗರಾಜ್ ಬಲ್ಲಾಳ್, ಉಪಾಧ್ಯಕ್ಷ ಹರಿಭಟ್, ಖಜಾಂಜಿ ಲಕ್ಷ್ಮೀನಾರಾಯಣ ಉಪಾಧ್ಯ, ಸದಸ್ರರಾದ ಸುದರ್ಶನ್ ರಾವ್, ಮಧ್ವರಾಜ್ ಭಟ್, ಪ್ರಾಂಶುಪಾಲೆ ಡಾ. ಗೀತಾ ಶಶಿಧರ್, ಶಾಲೆಯ ತಾಂತ್ರಿಕ ಶಿಕ್ಷಕ ವೃಂದದವರಾದ ಪವಿತ್ರ, ಪದ್ಮಜಾ, ರವೀಶ್, ಸುಹಾನ್, ವರ್ಷಿತಾ ಉಪಸ್ಥಿತರಿದ್ದರು. ಮಧ್ವರಾಜ್ ಭಟ್ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಯ್ಪುರ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ

ರಾಯ್ಪುರ, ಏ.15: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವೇದಾಂತ ಲಿಮಿಟೆಡ್ ಉಷ್ಣ ವಿದ್ಯುತ್...

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್...

ದಮನಿತರ ಪಾಲಿನ ಬಿಡುಗಡೆಯ ಬೆಳಕು ಅಂಬೇಡ್ಕರ್‌

ಹಿರಿಯಡಕ, ಏ.15: ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ...
error: Content is protected !!