Saturday, July 25, 2026
Saturday, July 25, 2026

ಪೂಣ೯ಪ್ರಜ್ಞ ಪದವಿಪೂರ್ವ ಕಾಲೇಜು: ಬಹುಮಾನ ವಿತರಣಾ ಕಾರ್ಯಕ್ರಮ

ಪೂಣ೯ಪ್ರಜ್ಞ ಪದವಿಪೂರ್ವ ಕಾಲೇಜು: ಬಹುಮಾನ ವಿತರಣಾ ಕಾರ್ಯಕ್ರಮ

Date:

ಉಡುಪಿ, ಡಿ.25: ಪ್ರತಿಭೆಯೊಂದಿಗೆ ಸೃಜನಶೀಲತೆಯು ಒಳಗೊಂಡಿರಬೇಕು. ಇಂದಿನ ಜಾಗತೀಕರಣದ ಸ್ಪರ್ಧಾತ್ಮಕ ಯುಗದಲ್ಲಿ ಬದುಕಿನ ಸವಾಲುಗಳನ್ನು ಎದುರಿಸಿ ನಿಲ್ಲಬೇಕಾದರೆ ಅಂಕಗಳೊಂದೆ ಸಾಕಾಗುವುದಿಲ್ಲ, ಇದರ ಜೊತೆಗೆ ವ್ಯಕ್ತಿತ್ವದ ಪರಿಪೂರ್ಣತೆಗೆ ಪಠ್ಯೇತರ ಚಟುವಟಿಕೆಗಳು ಕೂಡ ಅಷ್ಟೇ ಮುಖ್ಯ. ಆತ್ಮದ ಕಣ್ಣನ್ನು ಬೆಳಕಿನೆಡೆ ತಿರುಗಿಸುವುದೇ ನಿಜವಾದ ಶಿಕ್ಷಣ. ಇಂತಹ ಪರಿಪೂರ್ಣ ಶಿಕ್ಷಣ ನೀಡುವಲ್ಲಿ ಪೂಣ೯ಪ್ರಜ್ಞ ಕಾಲೇಜು ಮೇಲ್ಪಂಕ್ತಿಯಲ್ಲಿ ನಿಲ್ಲುತ್ತದೆ ಎಂದು ಎಂಜಿಎಂ. ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ಪ್ರತಿಭಾ ದಿನಾಚರಣೆ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಸಭಾಧ್ಯಕ್ಷತೆಯನ್ನು ಪೂಣ೯ಪ್ರಜ್ಞ ಪ.ಪೂ.ಕಾಲೇಜು ಆಡಳಿತ ಸಮಿತಿಯ ಗೌರವ ಕಾರ್ಯದರ್ಶಿ ಡಾ.ಪಿ.ಎಸ್.ಐತಾಳ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಸಂತೇೂಷ್ ಕುಮಾರ್, ಹಿರಿಯ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರತಿನಿಧಿ ವೈಷ್ಣವಿ ಸ್ವಾಗತಿಸಿ, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷೆ ದೀಪ್ತಿ ವರದಿ ಮಂಡಿಸಿದರು. ಕಾರ್ಯದರ್ಶಿ ಡಿಯೇೂನ್ ಹಾಡ್ರೀಲ್ ವಂದಿಸಿದರು. ಶೀಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!