ಉಡುಪಿ, ಸೆ.17: ಮಹಾತ್ಮ ಗಾಂಧಿ ಮೆಮೊರಿಯಲ್ ಸಂಧ್ಯಾ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ಬುಧವಾರ “Awaken to Ascend” ಎಂಬ ಪ್ರೇರಣಾತ್ಮಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್ ನಾಯಕ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಪ್ರೊ. (ಮೇಜರ್) ರಾಧಾಕೃಷ್ಣ ಎಂ ನಾಯಕತ್ವ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಖ್ಯಾತ ತರಬೇತುದಾರರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಬೆಳವಣಿಗೆಯಲ್ಲದೆ, ವ್ಯಕ್ತಿತ್ವ ವಿಕಾಸ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಬೆಳೆಸಿಕೊಳ್ಳಬೇಕು ಎಂದು ಮನದಟ್ಟುಗೊಳಿಸಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶ್ರಮ, ಶಿಸ್ತು ಮತ್ತು ಮೌಲ್ಯಾಧಾರಿತ ಬದುಕು ಮಾತ್ರ ಅವರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಲ್ಲದು ಎಂದು ಅವರು ಅಭಿಪ್ರಾಯಪಟ್ಟರು. ವಿಕಾಸ್ ಶೆಟ್ಟಿ ನಿರೂಪಿಸಿದರು.
ಎಂ.ಜಿ.ಎಂ ಸಂಧ್ಯಾ ಕಾಲೇಜು: ಪ್ರೇರಣಾತ್ಮಕ ಕಾರ್ಯಕ್ರಮ
ಎಂ.ಜಿ.ಎಂ ಸಂಧ್ಯಾ ಕಾಲೇಜು: ಪ್ರೇರಣಾತ್ಮಕ ಕಾರ್ಯಕ್ರಮ
Date:




By
ForthFocus™