ಮಂಗಳೂರು, ಸೆ.18: ಡಾ. ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇಲ್ಲಿ ಯುವ ರೆಡ್ಕ್ರಾಸ್, ರೋವರ್-ರೇಂಜರ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು, ಹಾಗೂ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಅರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಕೆ.ಎಂ.ಸಿ ಆಸ್ಪತ್ರೆ ಮಂಗಳೂರಿನ ವೈದ್ಯಾಧಿಕಾರಿ ಡಾ. ಸಿಂಚನ ಇವರು ಕಾರ್ಯಕ್ರಮ ಉದ್ಘಾಟಿಸಿ, ರಕ್ತದಾನದ ಮಹತ್ವ ಮತ್ತು ಪ್ರಯೋಜನಗಳ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ರಕ್ತದಾನದಲ್ಲಿ ವಿದ್ಯಾರ್ಥಿಗಳು ಭಾಗವಹಿಸವುದರಿಂದ ಅವರಿಗೆ ಸಾಮಾಜಿಕ ಜನಬ್ದಾರಿಯ ಅರಿವಾಗುತ್ತದೆ ಎಂದು ಹೇಳಿದರು.
ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಹಾಯಕರು, ಕಾಲೇಜಿನ ಯುವ ರೆಡ್ಕ್ರಾಸ್ ಘಟಕ, ರೋವರ್- ರೇಂಜರ್ಸ್, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರು ಮತ್ತು ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಗೂ ಬೋಧಕರು ಸೇರಿ ಒಟ್ಟು 126 ಮಂದಿ ರಕ್ತದಾನಗೈದರು. ಸುಮಾರು 655 ವಿದ್ಯಾರ್ಥಿಗಳು ಆರೋಗ್ಯ ತಪಾಸಣಾ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು. ಮೈತ್ರಿ ಬಿ. ಸ್ವಾಗತಿಸಿ, ಸಿಂಚನಾ ವಂದಿಸಿದರು. ಸಾರ ಕಾರ್ಯಕ್ರಮ ನಿರೂಪಿಸಿದರು.




By
ForthFocus™