Tuesday, September 8, 2026
Tuesday, September 8, 2026

ರಥಬೀದಿ ಕಾಲೇಜು: ಪ್ರಥಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ರಥಬೀದಿ ಕಾಲೇಜು: ಪ್ರಥಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Date:

ಮಂಗಳೂರು, ಅ.15: ರಥಬೀದಿಯ ಡಾ. ಪಿ. ದಯಾನಂದ ಪೈ ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮುಂದಿನ ಭವಿಷ್ಯಕ್ಕಾಗಿ ಸಾಕಷ್ಟು ಪ್ರಾಮಾಣಿಕ ಪ್ರಯತ್ನವನ್ನು ನಿರಂತರ ಅಧ್ಯಯನದ ಮೂಲಕ ಕೈಗೂಂಡು ತಮ್ಮನ್ನು ತಾವು ಸಮರ್ಥ ವ್ಯಕ್ತಿಗಳಾಗಿ ರೂಪಿಸಬೇಕೆಂದು ಮುಖ್ಯ ಅತಿಥಿಗಳಾಗಿದ್ದ ಸಂತ ಆಲೋಷಿಸಿಯಸ್ (ಸ್ವಾಯತ್ತ) ಕಾಲೇಜಿನ ವಾಣಿಜ್ಯ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಸುರೇಶ್ ಪೂಜಾರಿ ಹೇಳಿದರು. ಸ್ನಾತಕೋತ್ತರ ಪದವಿಯು ವಿದ್ಯಾರ್ಥಿಗಳಿಗೆ ಅಧ್ಯಾಪಕ ವೃತ್ತಿಯ ಸುಂದರ ಅವಕಾಶವನ್ನು ದೊರಕಿಸುತ್ತದೆ. ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಹಲವು ಅವಕಾಶಗಳು ನಾವೀನ್ಯ ಕ್ಷೇತ್ರದಲ್ಲಿ ತೆರೆಯುತ್ತಿದ್ದು, ವಿದ್ಯಾರ್ಥಿಗಳು ಕೃತಕ ಬುದ್ದಿಮತ್ತೆ, ವ್ಯವಹಾರ ವಿಶ್ಲೇಷಣೆ, ಹಣಕಾಸಿನ ವಿಶ್ಲೇಷಣೆ, ಮಾರುಕಟ್ಟೆ ವಿಶ್ಲೇಷಣೆ, ಮಾನವ ಸಂಪನ್ಮೂಲ ವಿಶ್ಲೇಷಣೆ, ಡೇಟಾ ನಿರ್ವಹಣೆ, ಡೇಟಾ ದೃಶ್ಯೀಕರಣ ಮತ್ತು ಮುನ್ಸೂಚಕ ಮಾಡೆಲಿಂಗ್ ಇತ್ಯಾದಿಗಳ ಕುರಿತ ಆಧ್ಯಯನವನ್ನು ಕೈಗೂಳ್ಳಲು ಪ್ರೇರೇಪಿಸಿದರು. ಜೊತೆಗೆ, ವಿವಿಧ ಸ್ಪರ್ಧಾತ್ಮಾಕ ಪರೀಕ್ಷೆಯನ್ನು ಬರೆಯಲು ಯೋಜನೆಯನ್ನು ಸಿದ್ದಪಡಿಸುವಂತೆ ಮಾರ್ಗದರ್ಶನ ನೀಡಿದರು.

ಸಭಾಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ. ಕಾಲೇಜಿನ ಸೌಲಭ್ಯಗಳು, ನೀತಿ ನಿಯಮಗಳನ್ನು ವಿವರಿಸಿ ಪಾಲಿಸಲು ಸೂಚಿಸಿದರು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತಿನ ಮಹತ್ವವನ್ನು ವಿವರಿಸಿ ಕಲಿಕೆಯ ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣದ ಕಡೆಗೆ ಗಮನ ಹರಿಸಲು ಸೂಚಿಸಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ದೇವಿಪ್ರಸಾದ ಸೈಬರ್ ಸುರಕ್ಷೆ, ರ‍್ಯಾಗಿಂಗ್ ತಡೆ ಮತ್ತು ಮಾದಕ ದ್ರವ್ಯ ಬಳಕೆ ತಡೆ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ಲೋಕೇಶ್‌ನಾಥ್ ಬಿ. ಮಾದಕ ದ್ರವ್ಯ ಸೇವನೆ ತಡೆ ಕುರಿತು ಪ್ರತಿಜ್ಞೆ ವಿಧಿ ನೆರವೇರಿಸಿದರು.

ಸಮಾಜಕಾರ್ಯ ವಿಭಾಗದ ಸಂಯೋಜಕರಾದ ಅರುಣ ಕುಮಾರಿ ಕಾರ್ಯಕ್ರಮವನ್ನು ಸಂಘಟಿಸಿದರು. ರಾಜ್ಯಶಾಸ್ತ್ರ ವಿಭಾಗದ ಸಂಯೋಜಕರಾದ ನಸೀಮಾ ಬೇಗಂ ಮತ್ತು ಇತರ ಬೋಧಕರು ಉಪಸ್ಥಿತರಿದ್ದರು. ಪ್ರಥಮ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರ್ವಹಿಸಿದರು. ದ್ವಿತೀಯಾ ಎಂ.ಕಾಂ ವಿದ್ಯಾರ್ಥಿ ದಿಕ್ಷೀತ್ ವಂದನಾರ್ಪಣೆಗೈದರು. ಪ್ರಥಮ ಎಂ.ಎಸ್.ಡಬ್ಲ್ಯೂ ದೀಕ್ಷಾ ಮತ್ತು ಬಳಗ ಪ್ರಾರ್ಥಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!