Wednesday, September 9, 2026
Wednesday, September 9, 2026

ಕನ್ನಡದ ಬೆಳವಣಿಗೆಗೆ ಯುವಜನರ ಕೊಡುಗೆ ಅತ್ಯಗತ್ಯ: ಡಾ. ಅರುಣಕುಮಾರ

ಕನ್ನಡದ ಬೆಳವಣಿಗೆಗೆ ಯುವಜನರ ಕೊಡುಗೆ ಅತ್ಯಗತ್ಯ: ಡಾ. ಅರುಣಕುಮಾರ

Date:

ಉಡುಪಿ, ನ.13: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಾಲೇಜಿನ ಟಿ. ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಡಾ. ಅರುಣಕುಮಾರ ಎಸ್. ಆರ್., ಸಹ ಸಂಶೋಧಕರು, ಆರ್.ಆರ್.ಸಿ (ಮಾಹೆ), ಎಂ.ಜಿ.ಎಂ ಕಾಲೇಜು ಆವರಣ ಇವರು ಪಾಲ್ಗೊಂಡರು. ಕನ್ನಡ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಪರಂಪರೆ, ಸಂಸ್ಕೃತಿ ಹಾಗೂ ಅಸ್ತಿತ್ವದ ಪ್ರತೀಕವಾಗಿದೆ. ಯುವ ಪೀಳಿಗೆಯು ಕನ್ನಡದ ಗೌರವವನ್ನು ಕಾಪಾಡಿ ಅದರ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ. ಅರುಣ್ ಕುಮಾರ್ ಎಸ್ .ಆರ್ ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಹಾಗು ಬಿ.ಸಿ.ಎ ಸಂಯೋಜಕರಾದ ಡಾ. ಎಂ.ವಿಶ್ವನಾಥ ಪೈ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ದೀಪಿಕಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅನುಪಮಾ ನಿರೂಪಿಸಿದರು. ಭೂಮಿಕಾ, ಪ್ರಸಿಜಾ, ತನ್ವಿ ನಾಡಗೀತೆಯನ್ನು ಹಾಡಿದರು. ಅತಿಥಿಗಳ ಪರಿಚಯವನ್ನು ಶ್ರೀರಾಮ್ ಮಾಡಿದರು. ಶ್ರೀಕರ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!