Saturday, February 7, 2026
Saturday, February 7, 2026

ಐಇಇಇ ಕಾನ್ಫರೆನ್ಸ್ ನಲ್ಲಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಗೆದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಸಂಶೋಧಕರು

ಐಇಇಇ ಕಾನ್ಫರೆನ್ಸ್ ನಲ್ಲಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಗೆದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಸಂಶೋಧಕರು

Date:

ಉಡುಪಿ, ನ.18: ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಂಶೋಧಕರು, ಭಾರತೀಯ ತಾಂತ್ರಿಕ ಸಂಸ್ಥೆ (IIT) ಧಾರವಾಡವು ನವೆಂಬರ್ 7ರಿಂದ 9, 2025 ರವರೆಗೆ ಆಯೋಜಿಸಿದ್ದ ಪ್ರತಿಷ್ಠಿತ ಐಇಇಇ ಇಂಜಿನಿಯರಿಂಗ್ ಇನ್ಫೊರ್ಮ್ಯಾಟಿಕ್ಸ್ ಸಮ್ಮೇಳನ (ICEI 2025) ದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿಯನ್ನು ಪಡೆದಿದ್ದಾರೆ. “VR-Based Crop Health Visualization and Analysis Using Multispectral Images for Precision Agriculture” ಎಂಬ ಶೀರ್ಷಿಕೆಯ ಅಡಿಯಲ್ಲಿ ನಿಟ್ಟೆಯ ಎಲೆಕ್ಟ್ರಾನಿಕ್ಸ್ ಹಾಗೂ ಸಂವಹನ ವಿಭಾಗದ ಯಶಸ್ ಆರ್. ಅವರು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಡಾ. ಭೋಜರಾಜ ಬಿ. ಇ. ಮತ್ತು ಎನ್.ಐ.ಟಿ.ಕೆ ಸುರತ್ಕಲ್ ನ ಜಲ ಸಂಪನ್ಮೂಲ ಹಾಗೂ ಓಶನ್ ಇಂಜಿನಿಯರಿಂಗ್ ವಿಭಾಗದ ಡಾ. ಪೃಥ್ವಿರಾಜ್ ಯು. ಅವರ ಸಹಯೋಗದೊಂದಿಗೆ ಮಾಡಲಾದ ಸಂಶೋಧನಾ ಕಾರ್ಯಕ್ಕೆ ಈ ಪ್ರಶಸ್ತಿಯು ಲಭಿಸಿದೆ. ಈ ಸಂಶೋಧನೆಯು ಬಹು-ವರ್ಣಚಿತ್ರಗಳ (Multispectral Imagery) ಬಳಕೆಯಿಂದ ಬೆಳೆಗಳ ಆರೋಗ್ಯವನ್ನು ಪ್ರಸ್ತುತ ಸಮಯದಲ್ಲಿ ವರ್ಚುವಲ್ ರಿಯಾಲಿಟಿ (VR) ಮೂಲಕ ವೀಕ್ಷಣೆ ಮತ್ತು ವಿಶ್ಲೇಷಣೆ ಮಾಡಲು ಹೊಸ ಚೌಕಟ್ಟನ್ನು ಪರಿಚಯಿಸುತ್ತದೆ. ಇದು ನಿಖರತೆ ಹಾಗೂ ಸುಸ್ಥಿರ ಕೃಷಿ ತಂತ್ರಜ್ಞಾನಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆಯನ್ನು ನೀಡುತ್ತದೆ.

ಈ ಇಂಟರ್ನ್‌ಶಿಪ್‌ ಕಾರ್ಯವನ್ನು NITK ಸುರತ್ಕಲ್‌ನ ಸಿಸ್ಟಮ್ ಡಿಸೈನ್ ಕೇಂದ್ರ (CSD) ದಲ್ಲಿ ಡಾ. ಪೃಥ್ವಿರಾಜ್ ಯು. ಅವರ ಮಾರ್ಗದರ್ಶನದಲ್ಲಿ ನೆರವೇರಿಸಲಾಗಿದ್ದು, ನಿಟ್ಟೆ ಅಪ್ಲೈಡ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕೇಂದ್ರ (NCAIA) ದ ಸಹಕಾರವನ್ನು ಪಡೆಯಲಾಗಿದೆ. ಈ ಯೋಜನೆಗೆ ನಿಟ್ಟೆಯ ಡಾ. ಭೋಜರಾಜ ಬಿ. ಇ. ಅವರ ಮಾರ್ಗದರ್ಶನ ಪ್ರಮುಖಪಾತ್ರ ವಹಿಸಿದೆ. ಈ ಪ್ರಶಸ್ತಿ, ನಿಟ್ಟೆ ತಾಂತ್ರಿಕ ಕಾಲೇಜಿನ ಅಂತರವಿದ್ಯಾ ಸಂಶೋಧನೆ ಹಾಗೂ ನವೋದ್ಯಮಕ್ಕೆ ನೀಡಲಾಗಿರುವ ಬೆಂಬಲ ಮತ್ತು ಪ್ರೋತ್ಸಾಹವನ್ನು ವಿವರಿಸುತ್ತದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!