Tuesday, July 28, 2026
Tuesday, July 28, 2026

ತೆಂಕನಿಡಿಯೂರು ಕಾಲೇಜು: ಓದುಗರ ವೇದಿಕೆ ‘ಅಭಿರುಚಿ’ ಉದ್ಘಾಟನೆ

ತೆಂಕನಿಡಿಯೂರು ಕಾಲೇಜು: ಓದುಗರ ವೇದಿಕೆ ‘ಅಭಿರುಚಿ’ ಉದ್ಘಾಟನೆ

Date:

ಮಲ್ಪೆ, ನ.20: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಗ್ರಂಥಾಲಯ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ 2025-26 ನೇ ಸಾಲಿನ ಓದುಗರ ವೇದಿಕೆ ‘ಅಭಿರುಚಿ’ ಯನ್ನು ಗ್ರಂಥಲಯ ಸಂಪನ್ಮೂಲಗಳ ಅತ್ಯುತ್ಕೃಷ್ಟ ಬಳಸಿಕೊಳ್ಳುವ ಆಯ್ದ ವಿದ್ಯಾರ್ಥಿಗಳಾದ ಪರಶುರಾಮ , ಜ್ಯೋತಿ, ಪ್ರಜಿತ್, ಪಲ್ಲವಿ ಹಾಗೂ ವಾಣಿಶ್ರೀ ಇವರಿಂದ ಉದ್ಘಾಟನೆಗೊಂಡಿತು. ಉದ್ಘಾಟಕರಲ್ಲೊಬ್ಬರಾದ ಎಂ.ಎ. ಕನ್ನಡ ಸ್ನಾತಕೋತ್ತರ ವಿದ್ಯಾರ್ಥಿ ಜ್ಯೋತಿ ಮಾತನಾಡುತ್ತಾ, ವಿದ್ಯಾರ್ಥಿ ದಿಸೆಯಲ್ಲಿ ಕೇವಲ ಬಿಡುವಿನ ವೇಳೆಯನ್ನಾದರೂ ಗ್ರಂಥಾಲಯದಲ್ಲಿ ಕಳೆದರೆ ಖಂಡಿತ ಶೈಕ್ಷಣಿಕ ಬದುಕು ಉಜ್ವಲವಾಗಬಲ್ಲದೆಂದರು. ಇನ್ನೋರ್ವವ ವಿದ್ಯಾರ್ಥಿನಿ ವಾಣಿಶ್ರೀ ಕೂಡ ತನ್ನ ಗ್ರಂಥಾಲಯ ಓದಿನ ಅನುಭವ ಹಂಚಿಕೊಂಡರು.

ಐಕ್ಯುಎಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು ಓದುವ ಹವ್ಯಾಸ ನಮ್ಮನ್ನು ಆಧುನಿಕತೆಗೆ ತೆರೆದುಕೊಳ್ಳುವಂತೆ ಪ್ರೇರೇಪಿಸುತ್ತದೆಯೆಂದರೆ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ ಓದುವ ಹವ್ಯಾಸ ನಮ್ಮ ಬದುಕನ್ನು ಸಾರ್ಥಕಗೊಳಿಸುವುದರ ಜೊತೆಗೆ ನಮ್ಮ ಸಂತೋಷ-ನೆಮ್ಮದಿಯನ್ನು ಹೆಚ್ಚಿಸುತ್ತದೆಯೆಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಜ್‌ಕುಮಾರ್, ಸಂದೇಶ್ ಹಾಗೂ ಓದುಗರ ವೇದಿಕೆಯ ಸಂಚಾಲಕರೂ ಹಾಗೂ ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ ಗ್ರಂಥಾಲಯ ಸಹಾಯಕಿ ಪ್ರಮೀಳಾ, ಬೋಧಕ- ಬೋಧಕೇತರ ವೃಂದದವರ ಜೊತೆಗೆ ವಿವಿಧ ಸ್ನಾತಕೋತ್ತರ ಮತ್ತು ಪದವಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು.

ರಾಜಕೀಯಶಾಸ್ತ್ರ ಸಹಪ್ರಧ್ಯಾಪಕ ಪ್ರಶಾಂತ್ ನೀಲಾವರ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಖ್ಯಾಶಾಸ್ತ್ರ ಸಹಪ್ರಾಧ್ಯಾಪಕ ಉಮೇಶ್ ಪೈ ವಂದಿಸಿದರು. ಇಂಗ್ಲೀಷ್ ಸ್ನಾತಕೋತ್ತರ ವಿದ್ಯಾರ್ಥಿನಿ ಪಲ್ಲವಿ ಕೊಡಗು ಕಾರ್ಯಕ್ರಮ ನಿರೂಪಿಸಿದರು. ಪ್ರತಿ ವಾರ ವಿವಿಧ ಸ್ನಾತಕೋತ್ತರ ಮತ್ತು ಪದವಿ ವಿಭಾಗಗಳಿಂದ ಕಾವ್ಯವಾಚನ- ಪುಸ್ತಕ ವಿಮರ್ಶೆ, ರಸಪ್ರಶ್ನೆ, ಕಾದಂಬರಿ ವಿಮರ್ಶೆ, ದಿನಪತ್ರಿಕೆಗಳ ಮಹತ್ವ ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸಲಾಗುವುದೆಂದು ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!