Tuesday, September 8, 2026
Tuesday, September 8, 2026

ಉಡುಪಿ ಜ್ಞಾನಸುಧಾ: ಜ್ಞಾನ ಸಂಭ್ರಮ 2025

ಉಡುಪಿ ಜ್ಞಾನಸುಧಾ: ಜ್ಞಾನ ಸಂಭ್ರಮ 2025

Date:

ಉಡುಪಿ, ನ.22: ಶಿಕ್ಷಣವು ದೇಶದ ಬದಲಾವಣೆಯ ಬಹುಮುಖ್ಯ ಅಸ್ತ್ರ. ದೇಶದ ಭವಿಷ್ಯವೇ ವಿದ್ಯಾರ್ಥಿಗಳು. ಅಂತಹ ಶ್ರೇಷ್ಠ ವಿದ್ಯಾರ್ಥಿಗಳನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಈ ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದೆ. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರ ಬದ್ಧತೆ, ಕಾಯಕನಿಷ್ಠೆ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ. ಇಂತಹ ಸಂಸ್ಥೆ ನನ್ನ ಕ್ಷೇತ್ರದಲ್ಲಿರುವುದು ನನ್ನ ಹೆಮ್ಮೆ. ಈ ಸಂಸ್ಥೆಯಿಂದ ಇನ್ನಷ್ಟು ಸಾಧಕರು ಮೂಡಿಬರಲಿ ಎಂದು ಉಡುಪಿಯ ಶಾಸಕರಾದ ಯಶ್‌ಪಾಲ್ ಸುವರ್ಣ ಅಭಿಪ್ರಾಯಪಟ್ಟರು.

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ “ಉಡುಪಿ ಜ್ಞಾನ ಸಂಭ್ರಮ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ಉಜ್ವಲ್ ಕನ್‌ಸ್ಟ್ರಕ್ಷನ್ ಮತ್ತು ಡೆವಲಪರ‍್ಸ್ ಆಡಳಿತ ನಿರ್ದೇಶಕಅ ಪುರುಶೋತ್ತಮ್ ಪಿ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಮಾತನಾಡಿ ಕಲಿಸುವ ಮಕ್ಕಳ ಮೊಗದ ನಗುವೆ ತಮ್ಮ ಆಸ್ತಿ ಎಂಬ ಭಾವನೆ ಶಿಕ್ಷಕರಲ್ಲಿರಲಿ. ನಮ್ಮ ಸುಖ ಬೇರೆಯವರ ದುಃಖಕ್ಕೆ ಕಾರಣವಾಗದಿರಲಿ. ಜನ್ಮದಾತರ ಸಂತೋಷಕ್ಕೆ ಕಾರಣರಾಗಿ ಮತ್ತು ಸಮಯದ ಜೊತೆಗೆ ಸಾಗಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

೨೦೨೪-೨೫ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ಸಾಧಕರು, ಕೆ.ಸಿ.ಟಿ. ಪರೀಕ್ಷೆಯಲ್ಲಿ ಸಾವಿರದೊಳಗಿನ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳು, ನೀಟ್ ಪರೀಕ್ಷೆಯಲ್ಲಿ ೫೦೦ ಅಂಕಗಳಿಗಿಂತ ಅಧಿಕ ಪಡೆದ ಸಾಧಕರು, ಕ್ರೀಡಾಕ್ಷೇತ್ರದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಮತ್ತು ಸಾಂಸ್ಕೃತಿಕ ಸಾಧಕರನ್ನು ಅಭಿನಂದಿಸಲಾಯಿತು.

ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಡುಪಿ ಜ್ಞಾನಸುಧಾ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ವಿದ್ಯಾರ್ಥಿ ನಾಯಕ, ನಾಯಕಿಯರಾದ ಆರ್ಯ ಎಂ ಮತ್ತು ಆರ್ನವಿ ಮತ್ತಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ವಂದಿಸಿ, ಜೋತ್ಸ್ನಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!