Friday, March 20, 2026
Friday, March 20, 2026

ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು: ವಾರ್ಷಿಕ ವಿಶೇಷ ಶಿಬಿರ

ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು: ವಾರ್ಷಿಕ ವಿಶೇಷ ಶಿಬಿರ

Date:

ಉಡುಪಿ, ನ.22: ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ,ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 2025–26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ 20-11-2025ರಿಂದ 26-11-2025ರವರೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಜೆ ಇಲ್ಲಿ ನಡೆಯಲಿದ್ದು ಶಿಬಿರವನ್ನು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ.) ಮುನಿಯಾಲು ಅಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಉದ್ಘಾಟಿಸಿ ಮಾತನಾಡುತ್ತಾ, ಸಮಾಜಮುಖಿ ಚಟುವಟಿಕೆಗಳಿಗೆ ಇಂದಿನ ಕಾಲದಲ್ಲಿ ಎಲ್ಲರ ಸಹಕಾರ ಮತ್ತು ಬದ್ಧತೆ ಅತ್ಯಗತ್ಯವಾಗಿದೆ ಎಂದರು.

ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸೇವೆ ಈ ಮೂರು ಕ್ಷೇತ್ರಗಳ ಬಲದಿಂದಲೇ ಒಂದು ಸಮೃದ್ಧ ಸಮಾಜವನ್ನು ನಿರ್ಮಿಸಬಹುದು ಎಂದು ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಕೇಶ್ ಹೆಗ್ಡೆ, ಅಧ್ಯಕ್ಷರು, ಗ್ರಾಮ ಪಂಚಾಯತ್, ಕಡ್ತಲ, ಮಹೇಶ್ ಟಿ. ಎಂ. ಠಾಣಾಧಿಕಾರಿ, ಅಜೆಕಾರು ಪೋಲಿಸ್ ಠಾಣೆ, ಯೋಗೀಶ್ ಮಲ್ಯ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಎಳ್ಳಾರೆ, ಹರೀಶ್ ಪಂಚಮಿ, ಪ್ರಧಾನ ಕಾರ್ಯದರ್ಶಿ ಪಂಚಮಿ ಚಾರಿಟೇಬಲ್ ಟ್ರಸ್ಟ್ (ರಿ.) ದೊಂಡೇರಂಗಡಿ, ಅಖಿಲೇಶ್ ಶೆಟ್ಟಿ, ಅಧ್ಯಕ್ಷರು ಸಾರ್ವಜನಿಕ ಗಣೇಶೋತ್ಸವ ಸಮಿತಿ, ದೊಂಡೇರಂಗಡಿ, ವಾಮನ ಭಟ್, ಅಧ್ಯಕ್ಷರು, ಹಳೆ ವಿದ್ಯಾರ್ಥಿ ಸಂಘ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ದೊಂಡೆರಂಗಡಿ, ದಯಾನಂದ ನಾಯಕ್‌ ಮುಖ್ಯೋಪಾಧ್ಯಾಯರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೊಂಡೇರಂಗಡಿ, ಪ್ರೊ.ವನಿತಾ ಮೈಯ್ಯ ಪ್ರಾಂಶುಪಾಲರು, ಮಹಾತ್ಮ ಗಾಂಧಿ ಸ್ಮಾರಕ ಕಾಲೇಜು, ಉಡುಪಿ, ಡಾ. ಎಂ. ವಿಶ್ವನಾಥ ಪೈ, ಉಪಪ್ರಾಂಶುಪಾಲರು, ಮಹಾತ್ಮಗಾಂಧಿ ಸ್ಮಾರಕ ಕಾಲೇಜು, ಉಡುಪಿ, ಡಾ.ಪ್ರಭಾಕರ್ ಶಾಸ್ತ್ರಿ, ISA ಫೌಂಡೇಶನ್, ಮಣಿಪಾಲ ಉಪಸ್ಥಿತರಿದ್ದರು.

ಶಿಬಿರದಲ್ಲಿ ಗ್ರಾಮ ಸ್ವಚ್ಛತೆ, ಆರೋಗ್ಯ ಜಾಗೃತಿ, ಪರಿಸರ ಸಂರಕ್ಷಣೆ, ಯುವಶಕ್ತಿ ವಿಕಾಸ ಮುಂತಾದ ಹಲವು ಸಮಾಜಮುಖಿ ಚಟುವಟಿಕೆಗಳನ್ನು ವಾರಪೂರ್ತಿ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಯಾದ ಸನತ್ ಕೋಟ್ಯಾನ್, ಯುವ ರೆಡ್ ಕ್ರಾಸ್ ಶಿಬಿರಾಧಿಕಾರಿ ದೀಪಿಕಾ ಹಾಗೂ ರೋವರ್ಸ್ ರೇಂಜರ್ಸ್ ಶಿಬಿರಾಧಿಕಾರಿಗಳಾದ ಅಕ್ಷತಾ ನಾಯಕ್ ಹಾಗೂ ಸ್ಟಾಲಿನ್ ಡಾನ್ಸನ್ ಡಿಸೋಜಾ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...

ಬಂಟಕಲ್ಲು: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಬಂಟಕಲ್ಲು, ಮಾ.20: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ...

ರಥಬೀದಿ ಕಾಲೇಜು: ಮಹಿಳಾ ದಿನಾಚರಣೆ

ಮಂಗಳೂರು, ಮಾ.20: ಸಮಾಜದ ಕಟ್ಟುಪಾಡುಗಳ ಮಧ್ಯೆಯೇ ಛಲದಿಂದ ಮುನ್ನಡೆದು ಗುರಿ ಸಾಧಿಸಿದ...
error: Content is protected !!