Saturday, June 13, 2026
Saturday, June 13, 2026

ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ಸನ್ಮಾನ

ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ಸನ್ಮಾನ

Date:

ಉಡುಪಿ: ವಿಶ್ವಾದ್ಯಂತ ಶ್ರೀ ಕೃಷ್ಣ ಭಕ್ತಿ ಪ್ರಸಾರ ಮಾಡುತ್ತಾ ಇದೀಗ ಪರ್ಯಾಯ ಸಂಚಾರದಲ್ಲಿರುವ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ​ ​ತೀರ್ಥ ಸ್ವಾಮೀಜಿಯವರನ್ನು ಅಮೆರಿಕಾದ ವಾಸಿಂಗ್ಟನ್ ಡಿಸಿ ಇಲ್ಲಿರುವ ಪ್ರಸಿದ್ಧ ಶ್ರೀ ಶಿವ ವಿಷ್ಣು ದೇವಸ್ಥಾನದಲ್ಲಿ ದೇವಸ್ಥಾನದ ಮುಖ್ಯಸ್ಥರಾದ ಮುರಳಿ ಇಳಂ ಬಿಲನ್ ಅವರು ಸ್ವಾಗತಿಸಿದರು ಮತ್ತು ಪರ್ಯಾಯ ಪೀಠಾರೋಹಣ ಸಂದರ್ಭದಲ್ಲಿ ಅಭಿನಂದನೆಗಳನ್ನು ಸಲ್ಲಿಸಿದರು.

ಸ್ವಾಮೀಜಿಯವರಿಗೆ ವಾಷಿಂಗ್ಟನ್ ಡಿಸಿಯಲ್ಲಿರುವ ಜೆಎಸ್ಎಸ್ ಸಂಸ್ಥೆ ಮುಖ್ಯಸ್ಥರಾದ ಕುಮಾರ್ ರಾಜಶೇಖರ್ ಅವರು, ಇಸ್ಕಾನ್ ಮುಖ್ಯಸ್ಥೆ ಆನಂದ ಬೃಂದಾವನ ಅವರು, ರಾಜಧಾನಿ ಮಂದಿರದ ವತಿಯಿಂದ ಶ್ರೀ ಶ್ರೀ ನಟೇಶ್ ಅಯ್ಯರ್ ರವರು​, ವೇದಾಂತ ಉಪನ್ಯಾಸಕಾರ ​ಜಯಕೃಷ್ಣ ನೆಲಮಂಗಲ ​ಕೂಡ ಅಭಿನಂದನೆಗಳನ್ನು ಸಲ್ಲಿಸಿದರು.

ಕಾವೇರಿ ​ಕನ್ನಡ ಕೂಟದ ಅಧ್ಯಕ್ಷ ಸತೀಶ್ ಬೆಳಗುಟ್ಟಿ​,​ ​ಮಾಜಿ ಅಧ್ಯಕ್ಷರಾದ ಶರ್ಮಿಳಾಮೂರ್ತಿ, ಗುರು ನಾಗರಾಜ್, ಕೃಷ್ಣಮೂರ್ತಿ, ಕಾವೇರಿ ಸಂಘದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ವೀರಶೈವದ ಸಂಘದ ಮುಖಂಡ ಮಲ್ಲಿಕಾರ್ಜುನ್, ಪ್ರಸಿದ್ಧ ಕನ್ನಡ ಅಂಕಣಕಾರ ಶ್ರೀನಿವಾಸ ಜೋಶಿಯವರು​ ​ಕೂಡ ಸ್ವಾಮೀಜಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಆಧುನಿಕ ಜೀವನದಲ್ಲಿ ಭಗವದ್ಗೀತೆ ಎನ್ನುವ ವಿಷಯದ ಮೇಲೆ ಅತ್ಯುತ್ತಮ ರೀತಿಯಲ್ಲಿ ಜನರ ಮನ ಮನಸ್ಸಿನ ಮೇಲೆ ಪರಿಣಾಮ ಬೀರುವಂತೆ ಶ್ರೀಪಾದರು ಮಾತನಾಡಿದರು. ಜನಜೀವನದಲ್ಲಿನ ಉದಾಹರಣೆಗಳ ಮೂಲಕ ಭಗವದ್ಗೀತೆಯ ತತ್ವವನ್ನು ಮನಮುಟ್ಟುವಂತೆ ತಿಳಿಸಿದರು. ಸುಮಾರು ​100​ ಜನರು ಭಗವದ್ಗೀತೆ ಲೇಖನ ಯಜ್ಞದ ಸಂಕಲ್ಪ ತೆಗೆದುಕೊಂಡರು. ಕಾರ್ಯಕ್ರಮದ ಪ್ರಾಯೋಜಕರಾದ ವಾಸುದೇವಮೂರ್ತಿ ಕಾರ್ಯಕ್ರಮ ನಡೆಸಿಕೊಟ್ಟರು​.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!