Saturday, June 13, 2026
Saturday, June 13, 2026

ಅಮೆರಿಕಾದ ಫೀನಿಕ್ಸ್ ಪುತ್ತಿಗೆ ಮಠದಲ್ಲಿ ಶತ ಚಂಡಿಕಾಯಾಗ ಸಂಪನ್ನ

ಅಮೆರಿಕಾದ ಫೀನಿಕ್ಸ್ ಪುತ್ತಿಗೆ ಮಠದಲ್ಲಿ ಶತ ಚಂಡಿಕಾಯಾಗ ಸಂಪನ್ನ

Date:

ಫೀನಿಕ್ಸ್: ಲೋಕ ಕಲ್ಯಾಣಾರ್ಥವಾಗಿ ಅಮೆರಿಕಾದ ಫೀನಿಕ್ಸ್ ನಗರದ ಪುತ್ತಿಗೆ ಮಠದಲ್ಲಿ ಏಪ್ರಿಲ್ 11 ರಂದು ಆರಂಭಗೊಂಡ ಶತಚಂಡಿಕಾಯಾಗವು ಏಪ್ರಿಲ್ 16 ರಂದು ಪೂರ್ಣಾಹುತಿ ಮೂಲಕ ಸಂಪನ್ನಗೊಂಡಿತು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಂಕಲ್ಪದಂತೆ ಜರಗಿದ ಈ ವಿಶಿಷ್ಟ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.

10 ಋತ್ವಿಜರಿಂದ 100 ಪಾರಾಯಣ, ಒಂದು ಲಕ್ಷ ನವಾಕ್ಷರಿ ಮಂತ್ರ ಜಪ, ಹತ್ತು ಸಾವಿರ ಆಜ್ಯ ಹೋಮ ಮೂಲಕ ಶತಚಂಡಿಕಾಯಾಗ ನೆರವೇರಿತು. ಶತ ಚಂಡಿಕಾ ಯಾಗಕ್ಕೆ 70 ಕೆಜಿ ಪರಮಾನ್ನ ಬಳಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀನಿವಾಸ ದೇವರಿಗೆ ಹಾಗೂ ಶ್ರೀ ದುರ್ಗೆಗೆ ಕುಂಭಾಭಿಷೇಕ ಜರಗಿತು.

ಧಾರ್ಮಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಆಶೀರ್ವದಿಸಿದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಲೋಕದಲ್ಲಿ ಇಂದು ಸುಖ, ಶಾಂತಿ ಸಮೃದ್ಧಿಗೆ ವಿಪರೀತ ಬೇಡಿಕೆ ಇದೆ. ಈ ಮೂರು ಪ್ರಾಪ್ತವಾಗಬೇಕಾದರೆ ಶ್ರೀದೇವಿಗೆ ಶರಣು ಹೋಗಬೇಕು, ಅರಾಧಿಸಬೇಕು. ಈ ಹಿನ್ನಲೆಯಲ್ಲಿ ಲೋಕದಲ್ಲಿ ಶಾಂತಿ ನೆಲಸುವ ಉದ್ದೇಶದಿಂದ ಫೀನಿಕ್ಸ್ ನಗರದಲ್ಲಿ ಶತಚಂಡಿಕಾ ಯಾಗವನ್ನು ಆಯೋಜಿಸಲಾಯಿತು ಎಂದು ಹೇಳಿದರು.

ಅಮೇರಿಕಾದ ನಾಗರಿಕರಿಗೆ ದೈವ ಭಕ್ತಿ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಅಮೆರಿಕೆಯ ಈ ಪ್ರದೇಶ ಅರಿಜೋನಾ ಹರಿ ಜೋನ್ ಆಗಲಿ. ಟೆಂಪೆ ಟೆಂಪಲ್ ಆಗಲಿ. ಪ್ರೀಸ್ಟ್ ಸ್ಟ್ರೀಟ್ ಪುರೋಹಿತರ ಬೀದಿಯಾಗಲಿ ಎಂದೂ ಅನುಗ್ರಹಿಸಿದರು. ವಿಷ್ಣು ಚಕ್ರಾಬ್ಜ್ಯ ಪೂಜೆಯೊಂದಿಗೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಪ್ರಧಾನ ಅರ್ಚಕರಾದ ಕಿದಿಯೂರು ರಾಮದಾಸ್ ಭಟ್, ಶ್ರೀಕಾಂತ್ ಸಾಮಗ, ರಾಘವೇಂದ್ರ ಕೊಡಂಚ, ಅಮೆರಿಕೆಯ 9 ಮಠಗಳ ಪ್ರಧಾನ ಅರ್ಚಕರು ಟೆಂಪೆ ನಗರದ ಮೇಯರ್ ಅವರ ಪ್ರತಿನಿಧಿ ಪ್ಯಾರಿಷ್ ಸ್ಪಿಟ್ಜ್, ಫಿನಿಕ್ಸ್ ಪುತ್ತಿಗೆ ಮಠದ ಶ್ರೀ ವೆಂಕಟೇಶ ದೇವಸ್ಥಾನದ ಪ್ರಧಾನ ಅರ್ಚಕ ಕಿರಣ ರಾವ್, ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರತೀಶ್ ತಂತ್ರಿ ಉಪಸ್ಥಿತರಿದ್ದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಮೆರಿಕೆದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಉಡುಪಿ ಶೈಲಿಯಲ್ಲಿ ಬಾಳೆಎಲೆಯಲ್ಲಿ ಮಾಹಾ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!