Wednesday, July 29, 2026
Wednesday, July 29, 2026

ಉಕ್ರೇನ್ ಮತ್ತು ರಷ್ಯಾ ಸಂಘರ್ಷ ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಅಗತ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ಉಕ್ರೇನ್ ಮತ್ತು ರಷ್ಯಾ ಸಂಘರ್ಷ ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಅಗತ್ಯವಿದೆ: ಪ್ರಧಾನಿ ನರೇಂದ್ರ ಮೋದಿ

Date:

ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್, ಆ.23: ಉಕ್ರೇನ್ ಮತ್ತು ರಷ್ಯಾ ಎರಡು ರಾಷ್ಟ್ರಗಳ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಪರಿಹರಿಸಲು ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಶಾಂತಿಯನ್ನು ತರಲು ಅಗತ್ಯವಿರುವ ಪ್ರತಿಯೊಂದು ಪ್ರಯತ್ನದಲ್ಲಿ ಸಕ್ರಿಯ ಪಾತ್ರ ವಹಿಸಲು ಭಾರತ ಸಿದ್ಧವಾಗಿದೆ ಎಂದು ಅವರು ಭರವಸೆ ನೀಡಿದರು. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಮೋದಿ ಅವರು ಭಾರತವು ಶಾಂತಿಯ ಪ್ರಯತ್ನಗಳನ್ನು ಸಕ್ರಿಯವಾಗಿ ಯೋಜಿಸಿದೆ ಮತ್ತು ನಮ್ಮ ವಿಧಾನವು ಜನಕೇಂದ್ರಿತವಾಗಿದೆ ಎಂದು ಹೇಳಿದರು.

ಭಾರತವು ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಬೆಂಬಲಿಸುತ್ತದೆ ಎಂದು ಹೇಳಿದರು. ತಮ್ಮ ಇತ್ತೀಚಿನ ರಷ್ಯಾ ಭೇಟಿಯ ಕುರಿತು ಮಾತನಾಡಿದ ಪ್ರಧಾನಿ, ಯಾವುದೇ ಸಮಸ್ಯೆಗೆ ಯುದ್ಧಭೂಮಿಯಲ್ಲಿ ಎಂದಿಗೂ ಪರಿಹಾರ ಸಿಗುವುದಿಲ್ಲ, ಆದರೆ ಮಾತುಕತೆ, ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹಾರ ಸಿಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಹೇಳಿದರು. ಯುದ್ಧದ ಆರಂಭಿಕ ಹಂತದಲ್ಲಿ ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಸಹಾಯ ಮಾಡಿದ್ದಕ್ಕಾಗಿ ಉಕ್ರೇನ್ ಅಧ್ಯಕ್ಷರಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು. ಯಾವುದೇ ಮಾನವೀಯ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!