Home ಸುದ್ಧಿಗಳು ಕ್ರೈಂ ಸಿಸಿಬಿ ಪೊಲೀಸರ ದಿಢೀರ್ ಕಾರ್ಯಾಚರಣೆ

ಸಿಸಿಬಿ ಪೊಲೀಸರ ದಿಢೀರ್ ಕಾರ್ಯಾಚರಣೆ

461
0

ರೌಡಿಗಳ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಪೊಲೀಸರು ಶನಿವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿದರು. ಶ್ವಾನ ದಳದ ಜೊತೆಗೆ ಆಗಮಿಸಿದ ಸಿಸಿಬಿ ಪೊಲೀಸರು ಬೆಳಿಗ್ಗೆ 5 ಗಂಟೆಯಿಂದ ಜೈಲಿನ ಒಳಗೆ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ತಪಾಸಣೆ ನಡೆಸಿದರು.

ಈ ಕುರಿತು ಮಾಹಿತಿ ನೀಡಿದ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್, ಕಾರ್ಯಾಚರಣೆ ಸಂದರ್ಭದಲ್ಲಿ ಮೊಬೈಲ್ ಫೋನ್, ಗಾಂಜಾ ಸೇದುವ ಪೈಪುಗಳು, ಚಾಕು, ಸಿಗರೇಟ್, ಮೆಮೊರಿ ಕಾರ್ಡ್, ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ತನಿಖೆ ನಡೆಯಲಿದೆ ಎಂದು ಸಂದೀಪ್ ಪಾಟೀಲ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.