Friday, June 5, 2026
Friday, June 5, 2026

ಟಿ20 ವಿಶ್ವಕಪ್: ಭಾರತ ಶುಭಾರಂಭ

ಟಿ20 ವಿಶ್ವಕಪ್: ಭಾರತ ಶುಭಾರಂಭ

Date:

ನವದೆಹಲಿ, ಫೆ.12: ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಟಿ20 ವಿಶ್ವಕಪ್ ಪಂದ್ಯಾಕೂಟದ ಭಾರತ ಮತ್ತು ನಮೀಬಿಯಾ ಪಂದ್ಯದಲ್ಲಿ ಭಾರತ 93 ರನ್ನುಗಳ ಗೆಲುವು ಪಡೆಯುವ ಮೂಲಕ ಶುಭಾರಂಭ ಮಾಡಿದೆ. ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡಕ್ಕೆ ಆರಂಭಿಕ ಇಶಾನ್ ಕಿಶನ್ ಸಂಜು ಸ್ಯಾಮ್ಸನ್ ಜೋಡಿ ಉತ್ತಮ ಜತೆಯಾಟದ ನಿರೀಕ್ಷೆ ಮೂಡಿಸಿದರು.

ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ನಡೆಸಿ ಕೇವಲ 24 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 6 ಬೌಂಡರಿ ನೆರವಿನೊಂದಿಗೆ 61 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 52 ರನ್ ಗಳಿಸಿದರು. 20 ಓವರ್ ಗಳಲ್ಲಿ ಭಾರತ 9 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿತು.

ಬೃಹತ್ ಗುರಿ ಬೆನ್ನತ್ತಿದ್ದ ನಮೀಬಿಯಾ ತಂಡಕ್ಕೆ ವೇಗಿ ಅರ್ಷದೀಪ್ ಸಿಂಗ್ ಮೊದಲ ಆಘಾತ ನೀಡಿದರು. 18.2 ಓವರ್ ಗಳಲ್ಲಿ ನಮೀಬಿಯಾ 116 ರನ್ನುಗಳಿಗೆ ಸರ್ವಪತನವಾಯಿತು. ವರುಣ್ ಚಕ್ರವರ್ತಿ 2 ಓವರ್ ಗಳಲ್ಲಿ ಕೇವಲ 7 ರನ್ ನೀಡುವ ಮೂಲಕ 3 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!