Saturday, September 5, 2026
Saturday, September 5, 2026

ಭಾರತಕ್ಕೆ ಟಿ20 ವಿಶ್ವಕಪ್ ಕಿರೀಟ

ಭಾರತಕ್ಕೆ ಟಿ20 ವಿಶ್ವಕಪ್ ಕಿರೀಟ

Date:

ಅಹಮದಾಬಾದ್, ಮಾ.8: ಇಲ್ಲಿಯ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಟಿ20 ವಿಶ್ವಕಪ್ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 96 ರನ್ ಗಳ ಅಭೂತಪೂರ್ವ ಅಭೂತಪೂರ್ವ ಗೆಲುವನ್ನು ಸಾಧಿಸಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ ವಿಕೆಟಿಗೆ ಸಂಜು ಸ್ಯಾಮ್ಸನ್ ಅಭಿಷೇಕ್ ಶರ್ಮಾ ಜೋಡಿ 98 ರನ್ ಗಳ ಜತೆಯಾಟ ನೀಡಿತು. ಸಂಜು 46 ಎಸೆತಗಳಲ್ಲಿ 8 ಸಿಕ್ಸರ್ ಮತ್ತು 5 ಬೌಂಡರಿ ಒಳಗೊಂಡ 89 ರನ್ ಬಾರಿಸಿದರೆ, ಶರ್ಮಾ 21 ಎಸೆತಗಳಲ್ಲಿ 52 ರನ್ ಹೊಡೆದರು. ಇಶಾನ್ ಕಿಶನ್ ಅಬ್ಬರದ ಆಟ ಆಡುತ್ತಾ 25 ಎಸೆತಗಳಲ್ಲಿ 54 ರನ್ ಗಳಿಸಿದರು. ಕೊನೆಯ ಓವರ್ ನಲ್ಲಿ ಅಬ್ಬರಿಸಿದ ಶಿವಂ ದುಬೆ 8 ಎಸೆತಗಳಲ್ಲಿ ಅಜೇಯ 26 ರನ್ ಗಳಿಸಿದರು. 20 ಓವರ್ ಗಳಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿತು.

ಬೃಹತ್ ಗುರಿಯನ್ನು ಚೇಸ್ ಮಾಡಲು ಆರಂಭಿಸಿದ ನ್ಯೂಜಿಲೆಂಡ್ ತಂಡಕ್ಕೆ ಅಕ್ಷರ್ ಪಟೇಲ್ ಮೊದಲ ಆಘಾತ ನೀಡಿದರು. ಟಿಮ್ ಸಿಫರ್ಟ್ 26 ಎಸೆತಗಳಲ್ಲಿ 52 ರನ್ ಗಳಿಸಿ ವರುಣ್ ಚಕ್ರವರ್ತಿ ಎಸೆತದಲ್ಲಿ ನಿರ್ಗಮಿಸಿದರು.

ಜಸ್ಪ್ರೀತ್ ಬುಮ್ರಾ ಅಮೋಘ ಬೌಲಿಂಗ್ ನಡೆಸಿ 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿ 4 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ನ್ಯೂಜಿಲೆಂಡ್ 19 ಓವರ್ ಗಳಲ್ಲಿ 159 ರನ್ ಗಳಿಗೆ ಸರ್ವಪತನವಾಯಿತು. 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!