Sunday, February 23, 2025
Sunday, February 23, 2025

ವಿಶ್ವಕಪ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಅಭೂತಪೂರ್ವ ಗೆಲುವು

ವಿಶ್ವಕಪ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಅಭೂತಪೂರ್ವ ಗೆಲುವು

Date:

ಅಹ್ಮದಾಬಾದ್, ಅ.14: (ಉಡುಪಿ ಬುಲೆಟಿನ್ ವರದಿ) ಇಲ್ಲಿಯ ನರೇಂದ್ರ ಮೋದಿ ಸ್ಟೇಡಿಯಮ್ ನಲ್ಲಿ ಶನಿವಾರ ನಡೆದ ಭಾರತ-ಪಾಕಿಸ್ತಾನ ಹೈ ವೋಲ್ಟೆಜ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ಪಾಕಿಸ್ತಾನದ ವಿರುದ್ಧ 7 ವಿಕೆಟ್ ಗಳ ಅಭೂತಪೂರ್ವ ಗೆಲುವನ್ನು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಭಾರತ, ಪಾಕಿಸ್ತಾನದ ಆರಂಭಿಕ ಆಟಗಾರರನ್ನು ತಕ್ಕ ಮಟ್ಟಿಗೆ ನಿಯಂತ್ರಿಸುವಲ್ಲಿ ಯಶಸ್ಸು ಕಂಡಿತು. ಪಾಕಿಸ್ತಾನಕ್ಕೆ ಮಹಮ್ಮದ್ ಸಿರಾಜ್ ಮೊದಲ ಆಘಾತ ನೀಡಿದರು. ನಾಯಕ ಬಾಬರ್ ಆಜಮ್ ಅರ್ಧ ಶತಕ ಸಿಡಿಸಿ ತಂಡವನ್ನು ಆಧರಿಸಿದರು. ಮಹಮ್ಮದ್ ರಿಜ್ವಾನ್ 49 ರನ್ ಗೆ ಔಟಾದರು. ಒಂದು ಹಂತದಲ್ಲಿ ಉತ್ತಮ ಸ್ಥಿತಿಯಲ್ಲಿದ್ದ ಪಾಕಿಸ್ತಾನ ದಿಢೀರನೆ ಕುಸಿತ ಕಂಡಿತು. 154 ಕ್ಕೆ 2 ವಿಕೆಟ್ ಕಳೆದುಕೊಂಡ ಪಾಕಿಸ್ತಾನ, 42.5 ಓವರ್ ಗಳಲ್ಲಿ 191ಕ್ಕೆ ಆಲ್ ಔಟ್ ಆಗಿ ಭಾರತಕ್ಕೆ ಸುಲಭದ ಗುರಿ ನೀಡಿತು. ಬುಮ್ರಾ, ಸಿರಾಜ್, ಪಾಂಡ್ಯ, ಕುಲದೀಪ್, ಜಡೇಜಾ ತಲಾ 2 ವಿಕೆಟ್ ಪಡೆದರು.

ಸುಲಭದ ಗುರಿಯನ್ನು ಬೆನ್ನತ್ತಿದ್ದ ಭಾರತ, ನಾಯಕ ರೋಹಿತ್ ಶರ್ಮಾರವರ ಅಮೋಘ ಬ್ಯಾಟಿಂಗ್ ಸಹಾಯದಿಂದ ಉತ್ತಮ ರನ್ ರೇಟ್ ಕಾಯ್ದುಕೊಳ್ಳುವಲ್ಲಿ ಯಶಸ್ಸು ಕಂಡಿತು. ರೋಹಿತ್ ಶರ್ಮಾ 63 ಎಸೆತಗಳಲ್ಲಿ ತಲಾ 6 ಸಿಕ್ಸ್ ಮತ್ತು ಬೌಂಡರಿ ಮೂಲಕ 86 ರನ್ ಸಿಡಿಸಿ ಔಟಾದರು. ರೋಹಿತ್ ಶರ್ಮಾಗೆ ಸಾಥ್ ನೀಡಿದ ಶ್ರೇಯಸ್ ಐಯ್ಯರ್ ಅಜೇಯ 53 ರನ್ ಸಿಡಿಸಿ ಗೆಲುವಿನ ರನ್ ಬಾರಿಸಿದರು. 30.3 ಓವರ್ ಗಳಲ್ಲಿ ಗೆಲುವಿನ ದಡ ಸೇರಿದ ಭಾರತ, ವಿಶ್ವಕಪ್ ನಲ್ಲಿ ಗೆಲುವಿನ ದಿಗ್ವಿಜಯ ಯಾತ್ರೆ ಮುಂದುವರಿಸಿದೆ.

ಬುಮ್ರಾ ಪಂದ್ಯಶ್ರೇಷ್ಠ: 7-1-19-2 ಮೂಲಕ 2.7 ಎಕನಾಮಿ ರೇಟ್ ಮೂಲಕ ಆಕರ್ಷಕ ಬೌಲಿಂಗ್ ನಡೆಸಿದ ಜಸ್ಪ್ರೀತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!