Saturday, August 15, 2026
Saturday, August 15, 2026

ಲಂಕೆಯಲ್ಲಿ ಸೂರ್ಯ ಪಡೆಯ ಸಿಂಹ ಘರ್ಜನೆಗೆ ಬೆದರಿದ ಪಾಕಿಸ್ತಾನ

ಲಂಕೆಯಲ್ಲಿ ಸೂರ್ಯ ಪಡೆಯ ಸಿಂಹ ಘರ್ಜನೆಗೆ ಬೆದರಿದ ಪಾಕಿಸ್ತಾನ

Date:

ಯು.ಬಿ.ಎನ್.ಡಿ., ಫೆ.15: ಭಾನುವಾರ ಶ್ರೀಲಂಕಾದಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ಟಿ20 ವಿಶ್ವಕಪ್ ಹೈವೋಲ್ಟೆಜ್ ಪಂದ್ಯದಲ್ಲಿ ಭಾರತ 61 ರನ್ನುಗಳ ಅಭೂತಪೂರ್ವ ಗೆಲುವನ್ನು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರ ಇಶಾನ್ ಕಿಶನ್ ಸ್ಪೋಟಕ ಆರಂಭ ಒದಗಿಸಿದರು. ಕೇವಲ 40 ಎಸೆತಗಳಲ್ಲಿ 77 ರನ್ ಗಳಿಸಿದರು. ಸ್ಪಿನ್ ಬೌಲರ್ ಗಳನ್ನೇ ಇಳಿಸಿದ ಪಾಕಿಸ್ತಾನದ ರಣತಂತ್ರವನ್ನು ಸಮರ್ಥವಾಗಿ ಸೂರ್ಯಕುಮಾರ್ ಯಾದವ್ ಶಿವಂ ದುಬೆ ಎದುರಿಸಿದರು. 20 ಓವರ್ ಗಳಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಆರಂಭಿಕ ಓವರ್ ನಲ್ಲಿ ಹಾರ್ದಿಕ್ ಪಾಂಡ್ಯ ಪಾಕಿಸ್ತಾನಕ್ಕೆ ಮೊದಲ ಆಘಾತ ನೀಡಿದರು. ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹಾರ್ದಿಕ್ ಪಾಂಡ್ಯ, ಬುಮ್ರಾ ತಲಾ 2 ವಿಕೆಟ್ ಪಡೆದರು. 34 ರನ್ ಆಗುವಷ್ಟರಲ್ಲಿ ಪಾಕಿಸ್ತಾನ 4 ವಿಕೆಟ್ ಕಳೆದುಕೊಂಡು ಸೋಲಿನ ದವಡೆಯಲ್ಲಿ ಪ್ರವೇಶಿಸಲು ಸಜ್ಜಾಗಿತ್ತು. ಅಂತಿಮವಾಗಿ ಪಾಕಿಸ್ತಾನ 114 ರನ್ನುಗಳಿಗೆ ಸರ್ವಪತನವಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೂ. 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ, ಆ.14: ಮೂಡುಪೆರಂಪಳ್ಳಿ ವಾರ್ಡಿನ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸುಮಾರು 75...

ಮುಜರಾಯಿ ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ, ಆ.14: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು,...

ಕೊಂಕಣಿ ಭಾಷಾ ರಾಷ್ಟ್ರೀಯ ಮಾನ್ಯತಾ ದಿನ 2026: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ, ಆ.14: ಶ್ರೀ ಲಕ್ಷ್ಮೀ ವೆಂಕಟೇಶ ಕಲಾ ಸೇವಾ ಟ್ರಸ್ಟ್ (ರಿ)....
error: Content is protected !!