Saturday, July 4, 2026
Saturday, July 4, 2026

ಲಂಕೆಯಲ್ಲಿ ಸೂರ್ಯ ಪಡೆಯ ಸಿಂಹ ಘರ್ಜನೆಗೆ ಬೆದರಿದ ಪಾಕಿಸ್ತಾನ

ಲಂಕೆಯಲ್ಲಿ ಸೂರ್ಯ ಪಡೆಯ ಸಿಂಹ ಘರ್ಜನೆಗೆ ಬೆದರಿದ ಪಾಕಿಸ್ತಾನ

Date:

ಯು.ಬಿ.ಎನ್.ಡಿ., ಫೆ.15: ಭಾನುವಾರ ಶ್ರೀಲಂಕಾದಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ಟಿ20 ವಿಶ್ವಕಪ್ ಹೈವೋಲ್ಟೆಜ್ ಪಂದ್ಯದಲ್ಲಿ ಭಾರತ 61 ರನ್ನುಗಳ ಅಭೂತಪೂರ್ವ ಗೆಲುವನ್ನು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರ ಇಶಾನ್ ಕಿಶನ್ ಸ್ಪೋಟಕ ಆರಂಭ ಒದಗಿಸಿದರು. ಕೇವಲ 40 ಎಸೆತಗಳಲ್ಲಿ 77 ರನ್ ಗಳಿಸಿದರು. ಸ್ಪಿನ್ ಬೌಲರ್ ಗಳನ್ನೇ ಇಳಿಸಿದ ಪಾಕಿಸ್ತಾನದ ರಣತಂತ್ರವನ್ನು ಸಮರ್ಥವಾಗಿ ಸೂರ್ಯಕುಮಾರ್ ಯಾದವ್ ಶಿವಂ ದುಬೆ ಎದುರಿಸಿದರು. 20 ಓವರ್ ಗಳಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಆರಂಭಿಕ ಓವರ್ ನಲ್ಲಿ ಹಾರ್ದಿಕ್ ಪಾಂಡ್ಯ ಪಾಕಿಸ್ತಾನಕ್ಕೆ ಮೊದಲ ಆಘಾತ ನೀಡಿದರು. ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹಾರ್ದಿಕ್ ಪಾಂಡ್ಯ, ಬುಮ್ರಾ ತಲಾ 2 ವಿಕೆಟ್ ಪಡೆದರು. 34 ರನ್ ಆಗುವಷ್ಟರಲ್ಲಿ ಪಾಕಿಸ್ತಾನ 4 ವಿಕೆಟ್ ಕಳೆದುಕೊಂಡು ಸೋಲಿನ ದವಡೆಯಲ್ಲಿ ಪ್ರವೇಶಿಸಲು ಸಜ್ಜಾಗಿತ್ತು. ಅಂತಿಮವಾಗಿ ಪಾಕಿಸ್ತಾನ 114 ರನ್ನುಗಳಿಗೆ ಸರ್ವಪತನವಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿ.ಎ. ಫೌಂಡೇಶನ್ ಫಲಿತಾಂಶ: ಜ್ಞಾನಸುಧಾದ 12 ವಿದ್ಯಾರ್ಥಿಗಳು ತೇರ್ಗಡೆ

ಉಡುಪಿ, ಜು.3: ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಮಟ್ಟದಲ್ಲಿ...

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ...

ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ...
error: Content is protected !!