Sunday, February 23, 2025
Sunday, February 23, 2025

ಭಾರತಕ್ಕೆ ಟಿ20 ವಿಶ್ವಕಪ್ ಕಿರೀಟ

ಭಾರತಕ್ಕೆ ಟಿ20 ವಿಶ್ವಕಪ್ ಕಿರೀಟ

Date:

ಬಾರ್ಬಡೋಸ್, ಜೂ.29: (ಉಡುಪಿ ಬುಲೆಟಿನ್ ವರದಿ) ಕೊನೆಗೂ ಕನಸು ನನಸಾಗಿದೆ. ಭಾರತಕ್ಕೆ ಟಿ20 ವಿಶ್ವಕಪ್ ಕಿರೀಟ ಒಲಿದಿದೆ. ತನ್ಮೂಲಕ ಎರಡನೇ ಬಾರಿಗೆ ಟಿ20 ವಿಶ್ವ ಚ್ಯಾಂಪಿಯನ್ ಆಗಿ ಮೂಡಿಬಂದಿದೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ದಕ್ಷಿಣ ಆಫ್ರಿಕಾದ ವಿರುದ್ಧ 7 ರನ್ ಗಳ ರೋಚಕ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ದಕ್ಷಿಣ ಆಫ್ರಿಕಾಗೆ ಕಠಿಣ ಸವಾಲು ನೀಡಿತು. ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು.

ಪಾಂಡ್ಯ ಕ್ಲೈಮಾಕ್ಸ್: ಗೆಲ್ಲಲು 30 ರನ್ ಗಳು ಬೇಕಾದಾಗ ಗೆಲುವಿನ ಮಾಲೆ ಆಫ್ರಿಕಾದ ಕಡೆಗೆ ಇತ್ತು. ಕ್ಲಾಸನ್ ಮತ್ತು ಮಿಲ್ಲರ್ ಜತೆಯಾಟದಿಂದ ಗೆಲುವು ಭಾರತದ ಕೈತಪ್ಪಿ ಹೋಯಿತು ಎನ್ನುವಷ್ಟರಲ್ಲಿ ಹಾರ್ದಿಕ್ ಪಾಂಡ್ಯ ಮಿಂಚಿನ ದಾಳಿ ನಡೆಸಿ ಪಂದ್ಯದ ದಿಕ್ಕನ್ನೇ ಬದಲಿಸಿದರು.

ಲಯ ಕಂಡುಕೊಂಡ ಕೊಹ್ಲಿ: ಈ ಬಾರಿಯ ವಿಶ್ವಕಪ್ ನಲ್ಲಿ ಸತತ ವೈಫಲ್ಯಗಳನ್ನು ಕಂಡುಕೊಂಡಿದ್ದ ವಿರಾಟ್ ಕೊಹ್ಲಿ ಫೈನಲ್ ಪಂದ್ಯದಲ್ಲಿ ಅಬ್ಬರಿಸಿ ಜವಾಬ್ದಾರಿಯುತವಾಗಿ ಆಡಿದರು. ಭಾರತ ಆರಂಭಿಕ ಆಘಾತವನ್ನು ಅನುಭವಿಸಿದಾಗ ತಂಡಕ್ಕೆ ಬೆನ್ನೆಲುಬಾಗಿ ನಿಂತ ಕೊಹ್ಲಿ, ಅಕ್ಷರ್ ಪಟೇಲ್ ಹಾಗೂ ಶಿವಮ್ ದುಬೆ ಜತೆ ಸೇರಿಕೊಂಡು ಗೌರವಯುತ ಸ್ಕೋರ್ ಕಲೆ ಹಾಕಲು ಪ್ರಮುಖ ಕೊಡುಗೆ ನೀಡಿದರು. ಕೊಹ್ಲಿ 59 ಎಸೆತಗಳಿಂದ 76 ರನ್ ಗಳಿಸಿದರೆ, ಅಕ್ಷರ್ ಪಟೇಲ್ 47 ರನ್, ದುಬೆ 27 ರನ್ ಗಳಿಸಿದರು.

ಅಜೇಯ ಭಾರತ: ಈ ಬಾರಿಯ ವಿಶ್ವಕಪ್ ನ ಎಲ್ಲಾ ಪಂದ್ಯಗಳಲ್ಲಿಯೂ ಭಾರತ ಗೆಲುವು ಸಾಧಿಸುವ ಮೂಲಕ ನೂತನ ದಾಖಲೆ ಬರೆದಿದ್ದು ಅಜೇಯವಾಗಿ ದಿಗ್ವಿಜಯ ಸಾಧಿಸಿದೆ. 2007 ರಲ್ಲಿ ಧೋನಿ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್ ಗೆದ್ದುಕೊಂಡಿದನ್ನು ಇಲ್ಲಿ ಸ್ಮರಿಸಬಹುದು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!