Sunday, February 8, 2026
Sunday, February 8, 2026

ಪ್ಯಾರಾಲಿಂಪಿಕ್ಸ್: ನೊಯ್ಡಾ ಜಿಲ್ಲಾಧಿಕಾರಿಗೆ ಬೆಳ್ಳಿ ಪದಕ

ಪ್ಯಾರಾಲಿಂಪಿಕ್ಸ್: ನೊಯ್ಡಾ ಜಿಲ್ಲಾಧಿಕಾರಿಗೆ ಬೆಳ್ಳಿ ಪದಕ

Date:

ಟೋಕಿಯೊ: ಟೋಕಿಯೋ ಯೊಯೊಗಿ ನ್ಯಾಶನಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಪ್ಯಾರಾಲಿಂಪಿಕ್ಸ್ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್.ಎಲ್4 ವಿಭಾಗದ ಫೈನಲ್ ನಲ್ಲಿ ಭಾರತದ ಖ್ಯಾತ ಪ್ಯಾರಾ ಬ್ಯಾಡ್ಮಿಂಟನ್ ತಾರೆ ಹಾಗೂ ಉತ್ತರ ಪ್ರದೇಶದ ನೊಯ್ಡಾ ಜಿಲ್ಲಾಧಿಕಾರಿ ನಮ್ಮದೇ ರಾಜ್ಯದವರಾಗಿರುವ ಸುಹಾಸ್ ಯತಿರಾಜ್ ರವರು ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ವಿಶ್ವದ ನಂಬರ್ 1 ಶ್ರೇಯಾಂಕದ ಫ್ರೆಂಚ್ ಆಟಗಾರ ಲ್ಯೂಕಸ್ ವಿರುದ್ಧ ಸುಹಾಸ್ 21-15, 17-21, 15-21 ಸೆಟ್ ಗಳಲ್ಲಿ ಪರಾಭವಗೊಂಡರೂ, ಈ ಪಂದ್ಯಾವಳಿಯುದ್ದಕ್ಕೂ ಸುಹಾಸ್ ತನ್ನ ಅತ್ಯುತ್ತಮ ಪ್ರದರ್ಶನದಿಂದ ಪ್ರೇಕ್ಷಕರ ಮನ ಗೆದ್ದರು. 1 ಗಂಟೆ 2 ನಿಮಿಷಗಳ ಕಾಲ ಸಾಗಿದ ಫೈನಲ್ ಪಂದ್ಯ ಹಲವಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು.

ಸುಹಾಸ್ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆಯ ಮೂಲಕ ಅಭಿನಂದಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿನಂದನೆಗಳನ್ನು ಸಲ್ಲಿಸಿ, ಜಿಲ್ಲಾಧಿಕಾರಿಯಾಗಿಯೂ ಕರ್ತವ್ಯದ ಒತ್ತಡವನ್ನು ನಿಭಾಯಿಸಿ ಕ್ರೀಡೆಯಲ್ಲೂ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ಎಂದು ಟ್ವೀಟ್ ಮಾಡಿದ್ದಾರೆ.

ಸುಹಾಸ್ ಲಾಲಿನಕೆರೆ ಯತಿರಾಜ್ ಅವರು ಜುಲೈ 2, 1983 ರಲ್ಲಿ ಕರ್ನಾಟಕದ ಹಾಸನದಲ್ಲಿ ಹುಟ್ಟಿದ್ದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಹಾಸನ ಮತ್ತು ಶಿವಮೊಗ್ಗದಲ್ಲಿ ಪಡೆದು, ಸುರತ್ಕಲ್ ಎನ್.ಐ.ಟಿ.ಕೆಯಲ್ಲಿ ಕಂಪ್ಯೂಟರ್ ಸೈಯನ್ಸ್ ಇಂಜಿನಿಯರಿಂಗ್ ಪದವಿ ಪಡೆದರು. ಅವರು 2007 ಬ್ಯಾಚ್ ಐ.ಎ.ಎಸ್ ಅಧಿಕಾರಿ.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!