Wednesday, April 22, 2026
Wednesday, April 22, 2026

ಭಾರತಕ್ಕೆ ಏಕದಿನ ಸರಣಿ

ಭಾರತಕ್ಕೆ ಏಕದಿನ ಸರಣಿ

Date:

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಇಂದು ನಡೆದ ಎರಡನೆಯ ಏಕದಿನ ಪಂದ್ಯದಲ್ಲಿ ಭಾರತ 44 ರನ್ನುಗಳ ಭರ್ಜರಿ ಗೆಲುವಿನೊಂದಿಗೆ ಸರಣಿ ಗೆದ್ದುಕೊಂಡಿದೆ. ತನ್ಮೂಲಕ ಸರಣಿಯ ಮೂರನೆಯ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್, ರೋಹಿತ್ ಶರ್ಮಾ ಪಡೆಯನ್ನು ಕಟ್ಟಿಹಾಕುವಲ್ಲಿ ಆರಂಭಿಕ ಯಶಸ್ಸನ್ನು ಕಂಡಿತು.

ಕೇವಲ 43 ರನ್ ಆಗುವಷ್ಟರಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು ಶೋಚನೀಯ ಸ್ಥಿತಿಯಲ್ಲಿದ್ದ ಭಾರತವನ್ನು ಸೂರ್ಯಕುಮಾರ್ ಯಾದವ್-ಕೆ.ಎಲ್ ರಾಹುಲ್ ಜೋಡಿ ಆಧರಿಸಿದ ಪರಿಣಾಮ 4ನೇ ವಿಕೆಟಿಗೆ ಉತ್ತಮ ಜತೆಯಾಟಕ್ಕೆ ಪಂದ್ಯ ಸಾಕ್ಷಿಯಾಯಿತು.

ಸೂರ್ಯಕುಮಾರ್ ಯಾದವ್ 64, ರಾಹುಲ್ 49 ಕ್ಕೆ ನಿರ್ಗಮಿಸಿದರು. 50 ಓವರ್ ಅಂತ್ಯದಲ್ಲಿ ಭಾರತ 9 ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿತು.

ಸುಲಭದ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ವಿಂಡೀಸ್ ಗೆ ಕರ್ನಾಟಕ ಎಕ್ಸ್ಪ್ರೆಸ್ ಖ್ಯಾತಿಯ ವೇಗಿ ಪ್ರಸಿದ್ ಕೃಷ್ಣ ಕಾಡಲು ಆರಂಭಿಸಿದರು. 9 ಓವರ್ ಎಸೆದ ಕೃಷ್ಣ 3 ಓವರ್ ಗಳಲ್ಲಿ ಯಾವುದೇ ರನ್ ನೀಡದೆ ಕೇವಲ್ 12 ರನ್ನಿಗೆ 4 ವಿಕೆಟ್ ಕಬಳಿಸಿ ಮಿಂಚಿದರು. 46 ಓವರ್ ಗಳಲ್ಲಿ ವೆಸ್ಟ್ ಇಂಡೀಸ್ 193ಕ್ಕೆ ಸರ್ವಪತನವಾಗುವ ಮೂಲಕ ರೋಹಿತ್ ಶರ್ಮಾ ಪಡೆಯ ವಿರುದ್ಧ ಸೋಲನ್ನು ಅನುಭವಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!