Sunday, February 23, 2025
Sunday, February 23, 2025

ಅಯ್ಯರ್- ಜಡೇಜಾ ಸ್ಪೋಟಕ ಆಟ, ಭಾರತಕ್ಕೆ ಟಿ20 ಸರಣಿ

ಅಯ್ಯರ್- ಜಡೇಜಾ ಸ್ಪೋಟಕ ಆಟ, ಭಾರತಕ್ಕೆ ಟಿ20 ಸರಣಿ

Date:

ಧರ್ಮಶಾಲಾ: ಇಂದು ಶ್ರೀಲಂಕಾ ವಿರುದ್ಧ ನಡೆದ ಮೂರು ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಗೆಲುವಿನೊಂದಿಗೆ ಸರಣಿ ಗೆಲುವಿನ ಸವಿಯನ್ನು ಕಂಡಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ರೋಹಿತ್ ಶರ್ಮಾ ಪಡೆಯ ಬೌಲಿಂಗ್ ನ್ನು ಶ್ರೀಲಂಕಾ ಧೂಳೀಪಟ ಮಾಡಿತು. ನಿಸಂಕಾ-ಗುಣತಿಲಕ ಜೋಡಿ ಭರ್ಜರಿ ಬ್ಯಾಟಿಂಗ್ ನಡೆಸಿ ಭಾರತೀಯ ಬೌಲರ್ ಗಳನ್ನು ಮನಸೋಇಚ್ಛೆ ದಂಡಿಸಿದರು. ನಿಸಂಕಾ 75 ರನ್ ಗಳಿಸಿದರೆ, ಗುಣತಿಲಕ 38 ರನ್ ಗಳಿಸಿದರು.

20 ಓವರ್ ಗಳಲ್ಲಿ ಲಂಕಾ 5 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿ ಭಾರತಕ್ಕೆ ಕಠಿಣ ಸವಾಲನ್ನು ನೀಡಿತು. ಆರಂಭಿಕ ಆಘಾತ ಎದುರಿಸಿದರೂ ಬಳಿಕ ಪುಟಿದೆದ್ದ ಭಾರತಕ್ಕೆ ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ ಸ್ಪೋಟಕ ಆಟ ವರದಾನವಾಯಿತು.

44 ಎಸೆತಗಳನ್ನು ಎದುರಿಸಿದ ಅಯ್ಯರ್ ಅಜೇಯ 74 ರನ್ ಗಳಿಸಿದರೆ, ಜಡೇಜಾ ಕೇವಲ 18 ಎಸೆತಗಳಲ್ಲಿ ಅಜೇಯ 45 ರನ್ ಗಳಿಸಿದರು. ಸ್ಯಾಮ್ಸನ್ 39 ರನ್ ಗಳಿಸಿದರು. ಕೇವಲ 17.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರತ ಗೆಲುವಿನ ಗುರಿಯನ್ನು ದಾಟಿ ಸರಣಿಯನ್ನು ಗೆದ್ದುಕೊಂಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!