Sunday, August 30, 2026
Sunday, August 30, 2026

ಅಯ್ಯರ್- ಜಡೇಜಾ ಸ್ಪೋಟಕ ಆಟ, ಭಾರತಕ್ಕೆ ಟಿ20 ಸರಣಿ

ಅಯ್ಯರ್- ಜಡೇಜಾ ಸ್ಪೋಟಕ ಆಟ, ಭಾರತಕ್ಕೆ ಟಿ20 ಸರಣಿ

Date:

ಧರ್ಮಶಾಲಾ: ಇಂದು ಶ್ರೀಲಂಕಾ ವಿರುದ್ಧ ನಡೆದ ಮೂರು ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಗೆಲುವಿನೊಂದಿಗೆ ಸರಣಿ ಗೆಲುವಿನ ಸವಿಯನ್ನು ಕಂಡಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ರೋಹಿತ್ ಶರ್ಮಾ ಪಡೆಯ ಬೌಲಿಂಗ್ ನ್ನು ಶ್ರೀಲಂಕಾ ಧೂಳೀಪಟ ಮಾಡಿತು. ನಿಸಂಕಾ-ಗುಣತಿಲಕ ಜೋಡಿ ಭರ್ಜರಿ ಬ್ಯಾಟಿಂಗ್ ನಡೆಸಿ ಭಾರತೀಯ ಬೌಲರ್ ಗಳನ್ನು ಮನಸೋಇಚ್ಛೆ ದಂಡಿಸಿದರು. ನಿಸಂಕಾ 75 ರನ್ ಗಳಿಸಿದರೆ, ಗುಣತಿಲಕ 38 ರನ್ ಗಳಿಸಿದರು.

20 ಓವರ್ ಗಳಲ್ಲಿ ಲಂಕಾ 5 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿ ಭಾರತಕ್ಕೆ ಕಠಿಣ ಸವಾಲನ್ನು ನೀಡಿತು. ಆರಂಭಿಕ ಆಘಾತ ಎದುರಿಸಿದರೂ ಬಳಿಕ ಪುಟಿದೆದ್ದ ಭಾರತಕ್ಕೆ ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ ಸ್ಪೋಟಕ ಆಟ ವರದಾನವಾಯಿತು.

44 ಎಸೆತಗಳನ್ನು ಎದುರಿಸಿದ ಅಯ್ಯರ್ ಅಜೇಯ 74 ರನ್ ಗಳಿಸಿದರೆ, ಜಡೇಜಾ ಕೇವಲ 18 ಎಸೆತಗಳಲ್ಲಿ ಅಜೇಯ 45 ರನ್ ಗಳಿಸಿದರು. ಸ್ಯಾಮ್ಸನ್ 39 ರನ್ ಗಳಿಸಿದರು. ಕೇವಲ 17.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರತ ಗೆಲುವಿನ ಗುರಿಯನ್ನು ದಾಟಿ ಸರಣಿಯನ್ನು ಗೆದ್ದುಕೊಂಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!