Sunday, February 8, 2026
Sunday, February 8, 2026

ಮತ್ತೊಮ್ಮೆ ಮುಗ್ಗರಿಸಿದ ರಾಹುಲ್ ಪಡೆ; ಆಫ್ರಿಕಾಗೆ ಏಕದಿನ ಸರಣಿ

ಮತ್ತೊಮ್ಮೆ ಮುಗ್ಗರಿಸಿದ ರಾಹುಲ್ ಪಡೆ; ಆಫ್ರಿಕಾಗೆ ಏಕದಿನ ಸರಣಿ

Date:

ಬೊಲ್ಯಾಂಡ್ ಪಾರ್ಕ್: ಇಂದು ನಡೆದ ಎರಡನೆಯ ಏಕದಿನ ಪಂದ್ಯದಲ್ಲೂ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮುಗ್ಗರಿಸಿದೆ. ತನ್ಮೂಲಕ ದಕ್ಷಿಣ ಆಫ್ರಿಕಾ ಸರಣಿ ಗೆಲುವಿನ ಸವಿಯೊಂದಿಗೆ ಕ್ಲೀನ್ ಸ್ವೀಪ್ ಎದುರು ನೋಡುತ್ತಿದೆ.

ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾಗೆ ನಾಯಕ ಕೆ.ಎಲ್. ರಾಹುಲ್ ಮತ್ತು ಶಿಖರ್ ಧವನ್ ಉತ್ತಮ ಆರಂಭ ಒದಗಿಸಿದರು. ರಾಹುಲ್ ಅರ್ಧಶತಕ (55) ಗಳಿಸಿದರು. ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟ್ ಆದರು.

ರಿಷಬ್ ಪಂತ್ ಹೊಡೆಬಡಿಯ ಆಟಕ್ಕೆ ಹೆಚ್ಚು ಒತ್ತು ನೀಡಿ 85 ರನ್ ಗಳಿಸಿ ತಂಡವನ್ನು ಆಧರಿಸಿದರು. ಕೊನೆಯಲ್ಲಿ ಶಾರ್ದುಲ್ ಠಾಕೂರ್ (ಅಜೇಯ 40) ಅಶ್ವಿನ್ (ಅಜೇಯ 25) ಜವಾಬ್ದಾರಿಯುತ ಆಟದ ನೆರವಿನಿಂದ ಭಾರತ 50 ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿ ಆಫ್ರಿಕಾಗೆ ಕಠಿಣ ಸವಾಲನ್ನು ನೀಡಿತು.

ಕಳಪೆ ಬೌಲಿಂಗ್ ನೊಂದಿಗೆ ಆಟ ಆರಂಭಿಸಿದ ಭಾರತದ ವೇಗಿಗಳನ್ನು ಟೆಂಬ ಬವುಮಾ ಪಡೆ ಮನಸೋ ಇಚ್ಛೆ ದಂಡಿಸಿ ಉತ್ತಮ ರನ್ ರೇಟ್ ಕಾಯ್ದುಕೊಂಡು ಭಾರತದ ನೀಡಿದ ಸವಾಲನ್ನು ನಿರಾಯಾಸವಾಗಿ ಎದುರಿಸಿ 11 ಎಸೆತಗಳು ಬಾಕಿ ಇರುವಾಗಲೇ 7 ವಿಕೆಟ್ ಗಳ ಭರ್ಜರಿ ಗೆಲುವನ್ನು ದಾಖಲಿಸಿದೆ.

ಆರಂಭಿಕ ಮಾಲನ್-ಡಿ ಕಾಕ್ ಜೋಡಿ ಮೊದಲ ವಿಕೆಟಿಗೆ 132 ರನ್ ಕಲೆ ಹಾಕಿದರು. ಶತಕ ವಂಚಿತ ಮಾಲನ್ 91 ರನ್ ಗಳಿಸಿದರೆ, ಡಿಕಾಕ್ 78 ರನ್ ಗಳಿಸಿದರು. ಕಳೆದ ಪಂದ್ಯದಲ್ಲಿ ಶತಕದೊಂದಿಗೆ ಅಬ್ಬರಿಸಿದ ರಸ್ಸಿ ವಾನ್ ಡರ್ ಡುಸೆನ್ ಅಜೇಯ 37 ರನ್ ಗಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!