Saturday, September 5, 2026
Saturday, September 5, 2026

ಮತ್ತೊಮ್ಮೆ ಮುಗ್ಗರಿಸಿದ ರಾಹುಲ್ ಪಡೆ; ಆಫ್ರಿಕಾಗೆ ಏಕದಿನ ಸರಣಿ

ಮತ್ತೊಮ್ಮೆ ಮುಗ್ಗರಿಸಿದ ರಾಹುಲ್ ಪಡೆ; ಆಫ್ರಿಕಾಗೆ ಏಕದಿನ ಸರಣಿ

Date:

ಬೊಲ್ಯಾಂಡ್ ಪಾರ್ಕ್: ಇಂದು ನಡೆದ ಎರಡನೆಯ ಏಕದಿನ ಪಂದ್ಯದಲ್ಲೂ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮುಗ್ಗರಿಸಿದೆ. ತನ್ಮೂಲಕ ದಕ್ಷಿಣ ಆಫ್ರಿಕಾ ಸರಣಿ ಗೆಲುವಿನ ಸವಿಯೊಂದಿಗೆ ಕ್ಲೀನ್ ಸ್ವೀಪ್ ಎದುರು ನೋಡುತ್ತಿದೆ.

ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾಗೆ ನಾಯಕ ಕೆ.ಎಲ್. ರಾಹುಲ್ ಮತ್ತು ಶಿಖರ್ ಧವನ್ ಉತ್ತಮ ಆರಂಭ ಒದಗಿಸಿದರು. ರಾಹುಲ್ ಅರ್ಧಶತಕ (55) ಗಳಿಸಿದರು. ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟ್ ಆದರು.

ರಿಷಬ್ ಪಂತ್ ಹೊಡೆಬಡಿಯ ಆಟಕ್ಕೆ ಹೆಚ್ಚು ಒತ್ತು ನೀಡಿ 85 ರನ್ ಗಳಿಸಿ ತಂಡವನ್ನು ಆಧರಿಸಿದರು. ಕೊನೆಯಲ್ಲಿ ಶಾರ್ದುಲ್ ಠಾಕೂರ್ (ಅಜೇಯ 40) ಅಶ್ವಿನ್ (ಅಜೇಯ 25) ಜವಾಬ್ದಾರಿಯುತ ಆಟದ ನೆರವಿನಿಂದ ಭಾರತ 50 ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿ ಆಫ್ರಿಕಾಗೆ ಕಠಿಣ ಸವಾಲನ್ನು ನೀಡಿತು.

ಕಳಪೆ ಬೌಲಿಂಗ್ ನೊಂದಿಗೆ ಆಟ ಆರಂಭಿಸಿದ ಭಾರತದ ವೇಗಿಗಳನ್ನು ಟೆಂಬ ಬವುಮಾ ಪಡೆ ಮನಸೋ ಇಚ್ಛೆ ದಂಡಿಸಿ ಉತ್ತಮ ರನ್ ರೇಟ್ ಕಾಯ್ದುಕೊಂಡು ಭಾರತದ ನೀಡಿದ ಸವಾಲನ್ನು ನಿರಾಯಾಸವಾಗಿ ಎದುರಿಸಿ 11 ಎಸೆತಗಳು ಬಾಕಿ ಇರುವಾಗಲೇ 7 ವಿಕೆಟ್ ಗಳ ಭರ್ಜರಿ ಗೆಲುವನ್ನು ದಾಖಲಿಸಿದೆ.

ಆರಂಭಿಕ ಮಾಲನ್-ಡಿ ಕಾಕ್ ಜೋಡಿ ಮೊದಲ ವಿಕೆಟಿಗೆ 132 ರನ್ ಕಲೆ ಹಾಕಿದರು. ಶತಕ ವಂಚಿತ ಮಾಲನ್ 91 ರನ್ ಗಳಿಸಿದರೆ, ಡಿಕಾಕ್ 78 ರನ್ ಗಳಿಸಿದರು. ಕಳೆದ ಪಂದ್ಯದಲ್ಲಿ ಶತಕದೊಂದಿಗೆ ಅಬ್ಬರಿಸಿದ ರಸ್ಸಿ ವಾನ್ ಡರ್ ಡುಸೆನ್ ಅಜೇಯ 37 ರನ್ ಗಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!