Sunday, February 23, 2025
Sunday, February 23, 2025

ವಿಶ್ವಕಪ್: ಗೇಮ್ ಚೇಂಜರ್ ಶಮಿ; ಫೈನಲ್ ಪ್ರವೇಶಿಸಿದ ಭಾರತ

ವಿಶ್ವಕಪ್: ಗೇಮ್ ಚೇಂಜರ್ ಶಮಿ; ಫೈನಲ್ ಪ್ರವೇಶಿಸಿದ ಭಾರತ

Date:

ಮುಂಬಯಿ, ನ. 15: (ಉಡುಪಿ ಬುಲೆಟಿನ್ ವರದಿ) ಇಲ್ಲಿಯ ವಾಂಖೆಡೆ ಸ್ಟೇಡಿಯಮ್ ನಲ್ಲಿ ಬುಧವಾರ ನಡೆದ ಹೈ ವೋಲ್ಟೇಜ್ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 70 ರನ್ ಗಳ ಅಭೂತಪೂರ್ವ ಗೆಲುವನ್ನು ಸಾಧಿಸಿ ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ನಡೆಸಿತು. ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಬಿರುಸಿನ ಆರಂಭ ಒದಗಿಸಿದರು. ರೋಹಿತ್ ಶರ್ಮಾ ಕೇವಲ 29 ಎಸೆತಗಳಲ್ಲಿ ತಲಾ 4 ಬೌಂಡರಿ ಮತ್ತು ಸಿಕ್ಸರ್ ಸಹಾಯದಿಂದ 47 ರನ್ ಗಳಿಸಿದರು. ಗಿಲ್ ಅಜೇಯ 80 ರನ್ ಗಳಿಸಿದರು.

ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ: ಏಕದಿನ ಪಂದ್ಯಗಳಲ್ಲಿ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಅತಿ ಹೆಚ್ಚಿನ ಶತಕಗಳ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದರು. 117 ರನ್ ಗಳಿಸಿದ ಕೊಹ್ಲಿ ಭಾರತ ತಂಡಕ್ಕೆ ಬೃಹತ್ ಮೊತ್ತ ಪೇರಿಸುವಲ್ಲಿ ಮಹತ್ವದ ಕೊಡುಗೆ ನೀಡಿದರು.

ಐಯ್ಯರ್ ಸತತ ಎರಡನೇ ಶತಕ: ಶ್ರೇಯಸ್ ಐಯ್ಯರ್ ಮತ್ತೊಮ್ಮೆ ಶತಕ ಬಾರಿಸಿ ಸಂಭ್ರಮಿಸಿದರು. ಕೇವಲ 70 ಎಸೆತಗಳಲ್ಲಿ 8 ಸಿಕ್ಸರ್ ಮತ್ತು 4 ಬೌಂಡರಿ ಸಹಾಯದಿಂದ 105 ರನ್ ಗಳಿಸಿದರು. ಕೊನೆಯ ಹಂತದಲ್ಲಿ ಕೆ.ಎಲ್. ರಾಹುಲ್ ಸ್ಪೋಟಕ ಆಟದ ಸಹಾಯದಿಂದ ಭಾರತ ತಂಡ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಪೇರಿಸಿತು.

ಬೃಹತ್ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ವೇಗಿ ಮೊಹಮ್ಮದ್ ಶಮಿ ಆರಂಭದಲ್ಲೇ ಆಘಾತ ನೀಡಿದರು. ಬಳಿಕ ಜತೆಗೂಡಿದ ವಿಲಿಯಮ್ಸನ್- ಮಿಶೆಲ್ ಜೋಡಿ ಉತ್ತಮ ಜೊತೆಯಾಟ ನೀಡಿ ಗೆಲುವಿನ ಭರವಸೆ ಮೂಡಿಸಿದರು. ಮಿಶೆಲ್ 134 ರನ್ ಗಳಿಸಿದರೆ, ನಾಯಕ ವಿಲಿಯಮ್ಸನ್ 69 ರನ್ ಗಳಿಸಿದರು.

ಶಮಿ ಮಾರಕ ದಾಳಿ: ಮೊಹಮ್ಮದ್ ಶಮಿ ಈ ವಿಶ್ವಕಪ್ ನಲ್ಲಿ ಮೂರನೇ ಬಾರಿಗೆ 5 ವಿಕೆಟ್ ಗಳ ಗೊಂಚಲು ಪಡೆದರು. ಶಮಿ 7 ವಿಕೆಟ್ ಪಡೆದರು.

ಅಂತಿಮವಾಗಿ ನ್ಯೂಜಿಲೆಂಡ್ 48.5 ಓವರ್ ಗಳಲ್ಲಿ 327 ಕ್ಕೆ ಆಲ್ ಔಟ್ ಆಯ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!