Sunday, February 23, 2025
Sunday, February 23, 2025

ದ್ವಿತೀಯ ಟಿ20: ಲಂಕಾ ವಿರುದ್ಧ ಮಂಕಾದ ಧವನ್ ಪಡೆ

ದ್ವಿತೀಯ ಟಿ20: ಲಂಕಾ ವಿರುದ್ಧ ಮಂಕಾದ ಧವನ್ ಪಡೆ

Date:

ಕೊಲೊಂಬೊ: ದ್ವಿತೀಯ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ 4 ವಿಕೆಟ್ಗಳಿಂದ ಜಯಗಳಿಸಿದೆ. ಟಾಸ್ ಗೆದ್ದು ಬೌಲಿಂಗ್ ನಡೆಸಲು ನಿರ್ಧರಿಸಿದ ಶ್ರೀಲಂಕಾ, ಭಾರತವನ್ನು 132 ರನ್ನುಗಳಿಗೆ ನಿಯಂತ್ರಿಸಿ ಗೆಲುವಿನ ಗುರಿಯನ್ನು ಸುಲಭವನ್ನಾಗಿಸಿತು.

ನಾಯಕ ಶಿಖರ್ ಧವನ್ 40 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ 29 ರನ್ ಗಳಿಸಿದರು. ಶ್ರೀಲಂಕಾದ ಅಖಿಲ ಧನಂಜಯ ಎರಡು ವಿಕೆಟ್ ಪಡೆದು ಭಾರತದ ಬ್ಯಾಟ್ಸ್ಮೆನ್ ಗಳನ್ನು ಕಟ್ಟಿ ಹಾಕಿದರು. 20 ಓವರುಗಳಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು.

ಸುಲಭದ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾಗೆ ಆರಂಭಿಕ ಆಘಾತ ನೀಡುವಲ್ಲಿ ಭಾರತೀಯ ಬೌಲರ್ ಗಳು ಯಶಸ್ಸು ಕಂಡರೂ ಭಾನುಕ, ಧನಂಜಯ, ಹಸರಂಗ ಹಾಗೂ ಕರುಣರತ್ನೆ ಜವಾಬ್ದಾರಿಯುತವಾಗಿ ಆಟವಾಡಿ ಲಂಕೆಯನ್ನು ಗೆಲುವಿನ ದಡ ಸೇರಿಸಿದರು. 19.4 ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 133 ರನ್ ಗಳಿಸುವ ಮೂಲಕ ಶ್ರೀಲಂಕಾ ಗೆಲುವಿನ ನಗೆಯನ್ನು ಬೀರಿತು.

ಸರ್ವಾಂಗೀಣ ಪ್ರದರ್ಶನಕ್ಕಾಗಿ ಧನಂಜಯ ಡಿಸಿಲ್ವ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು. ಇದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು ಸಮಬಲ ಸಾಧಿಸುವ ಮೂಲಕ ಅಂತಿಮ ಪಂದ್ಯದತ್ತ ಎಲ್ಲರ ಕುತೂಹಲ ಹೆಚ್ಚಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!