Monday, September 7, 2026
Monday, September 7, 2026

ದ್ವಿತೀಯ ಟಿ20: ಲಂಕಾ ವಿರುದ್ಧ ಮಂಕಾದ ಧವನ್ ಪಡೆ

ದ್ವಿತೀಯ ಟಿ20: ಲಂಕಾ ವಿರುದ್ಧ ಮಂಕಾದ ಧವನ್ ಪಡೆ

Date:

ಕೊಲೊಂಬೊ: ದ್ವಿತೀಯ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ 4 ವಿಕೆಟ್ಗಳಿಂದ ಜಯಗಳಿಸಿದೆ. ಟಾಸ್ ಗೆದ್ದು ಬೌಲಿಂಗ್ ನಡೆಸಲು ನಿರ್ಧರಿಸಿದ ಶ್ರೀಲಂಕಾ, ಭಾರತವನ್ನು 132 ರನ್ನುಗಳಿಗೆ ನಿಯಂತ್ರಿಸಿ ಗೆಲುವಿನ ಗುರಿಯನ್ನು ಸುಲಭವನ್ನಾಗಿಸಿತು.

ನಾಯಕ ಶಿಖರ್ ಧವನ್ 40 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ 29 ರನ್ ಗಳಿಸಿದರು. ಶ್ರೀಲಂಕಾದ ಅಖಿಲ ಧನಂಜಯ ಎರಡು ವಿಕೆಟ್ ಪಡೆದು ಭಾರತದ ಬ್ಯಾಟ್ಸ್ಮೆನ್ ಗಳನ್ನು ಕಟ್ಟಿ ಹಾಕಿದರು. 20 ಓವರುಗಳಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು.

ಸುಲಭದ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾಗೆ ಆರಂಭಿಕ ಆಘಾತ ನೀಡುವಲ್ಲಿ ಭಾರತೀಯ ಬೌಲರ್ ಗಳು ಯಶಸ್ಸು ಕಂಡರೂ ಭಾನುಕ, ಧನಂಜಯ, ಹಸರಂಗ ಹಾಗೂ ಕರುಣರತ್ನೆ ಜವಾಬ್ದಾರಿಯುತವಾಗಿ ಆಟವಾಡಿ ಲಂಕೆಯನ್ನು ಗೆಲುವಿನ ದಡ ಸೇರಿಸಿದರು. 19.4 ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 133 ರನ್ ಗಳಿಸುವ ಮೂಲಕ ಶ್ರೀಲಂಕಾ ಗೆಲುವಿನ ನಗೆಯನ್ನು ಬೀರಿತು.

ಸರ್ವಾಂಗೀಣ ಪ್ರದರ್ಶನಕ್ಕಾಗಿ ಧನಂಜಯ ಡಿಸಿಲ್ವ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು. ಇದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು ಸಮಬಲ ಸಾಧಿಸುವ ಮೂಲಕ ಅಂತಿಮ ಪಂದ್ಯದತ್ತ ಎಲ್ಲರ ಕುತೂಹಲ ಹೆಚ್ಚಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!