Monday, September 7, 2026
Monday, September 7, 2026

ದ್ವಿತೀಯ ಟೆಸ್ಟ್- ಉತ್ತಮ ಸ್ಥಿತಿಯಲ್ಲಿ ಭಾರತ

ದ್ವಿತೀಯ ಟೆಸ್ಟ್- ಉತ್ತಮ ಸ್ಥಿತಿಯಲ್ಲಿ ಭಾರತ

Date:

ಮುಂಬಯಿ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ನಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದೆ. ಮೂರನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ಸೋಲಿನ ಭೀತಿಯಲ್ಲಿದೆ.

ಇದಕ್ಕೂ ಮೊದಲು ದಿನದಾಟ ಆರಂಭಿಸಿದ ಭಾರತ, ಆರಂಭಿಕ ಜೋಡಿ ಮಾಯಂಕ್-ಪೂಜಾರ ವೇಗವಾಗಿ ರನ್ ಗಳಿಸಲು ಆರಂಭಿಸಿದರು.

ಮಾಯಂಕ್ ಅಗರ್ವಾಲ್ 62 ರನ್ ಗಳಿಸಿದರೆ, ಪೂಜಾರ 47 ರನ್ ಗಳಿಸಿ, ಇಬ್ಬರೂ ಅಜಾಜ್ ಪಟೇಲ್ ದಾಳಿಗೆ ವಿಕೆಟ್ ಒಪ್ಪಿಸಿದರು.

ಶುಭ್ಮನ್ ಗಿಲ್ 47, ನಾಯಕ ವಿರಾಟ್ ಕೊಹ್ಲಿ 36 ರನ್ ಗಳಿಸಿ ಉತ್ತಮ ಜೊತೆಯಾಟ ನೀಡಿದರು. ಮೊದಲ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಗಳಿಸಿದ ಸ್ಪಿನ್ನರ್ ಅಕ್ಷರ್ ಪಟೇಲ್ ಇಂದೂ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 26 ಎಸೆತಗಳನ್ನು ಎದುರಿಸಿ 4 ಸಿಕ್ಸರ್, 3 ಬೌಂಡರಿಗಳೊಂದಿಗೆ ಅಜೇಯ 41 ರನ್ ಗಳಿಸಿದರು.

ಭಾರತ 7 ವಿಕೆಟ್ ನಷ್ಟಕ್ಕೆ 276 ರನ್ ಗಳಿಸಿ ಡಿಕ್ಲೇರ್ ಮಾಡಿದ ನಂತರ ನ್ಯೂಜಿಲೆಂಡ್ 540ರ ಬ್ರಹತ್ ಗುರಿಯನ್ನು ಬೆನ್ನಟ್ಟುವ ಹಂತದಲ್ಲಿ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ಸೋಲಿನ ಭೀತಿಯಲ್ಲಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ಹತ್ತಕ್ಕೆ ಹತ್ತು ವಿಕೆಟ್ ಪಡೆದ ಅಜಾಜ್ ಪಟೇಲ್ ದ್ವಿತೀಯ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದರು. ನ್ಯೂಜಿಲೆಂಡ್ ಬ್ಯಾಟಿಂಗ್ ಲೈನ್ ಅಪ್ ನ್ನು ಧೂಳೀಪಟ ಮಾಡಿದ ರವಿಚಂದ್ರನ್ ಅಶ್ವಿನ್ 3 ವಿಕೆಟ್ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!