Monday, February 24, 2025
Monday, February 24, 2025

ಆಗುಂಬೆ ಘಾಟಿ- ಭಾರಿ ವಾಹನಗಳ ಸಂಚಾರ ನಿಷೇಧ

ಆಗುಂಬೆ ಘಾಟಿ- ಭಾರಿ ವಾಹನಗಳ ಸಂಚಾರ ನಿಷೇಧ

Date:

ರಾಷ್ಟ್ರ‍ೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ 1989 ಕಲಂ 221(ಎ)(2) & (5) ರನ್ವಯ ರಾಷ್ಟ್ರ‍ೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15 ರವರೆಗೆ 12 ಟನ್‌ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಬದಲಿ ಮಾರ್ಗದ ವಿವರ:
ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸಂಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!