Friday, July 24, 2026
Friday, July 24, 2026

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಹೊಂಗನಸು ವಿಶೇಷ ಕಾರ್ಯಕ್ರಮ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಹೊಂಗನಸು ವಿಶೇಷ ಕಾರ್ಯಕ್ರಮ

Date:

ಬೆಳ್ಮಣ್, ಡಿ.2: ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ ಎಂಬುದನ್ನು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನಮಗೆ ಕಲಿಸಿಕೊಟ್ಟಿದೆ ಎಂದು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಮಾಜಿ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಮನದಾಳದ ಮಾತುಗಳ ಮೂಲಕ ಹೇಳಿದರು. ಪ್ರತಿ ಬಾರಿ ಹೊಸತನದ ಯೋಜನೆ ಹಾಗೂ ಹೊಸ ಕಾರ್ಯಕ್ರಮಗಳ ಮೂಲಕ ಸಂಘಟನೆಯನ್ನು ಬೆಳೆಸಬಲ್ಲ ವ್ಯಕ್ತಿಯೇ ನಿಜವಾದ ನಾಯಕ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಎನ್ನುವುದು ಜನಸಾಮಾನ್ಯರ ಸಂಘ ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳ ತೆರೆದಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸದಸ್ಯರಾದ ಹರಿಣಿ ಪೂಜಾರಿ ಮನದಾಳದ ಮಾತುಗಳ ಮೂಲಕ ಹೇಳಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಆದಿತ್ಯವಾರ ಜರಗಿದ 26ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ ‘ಹೊಂಗನಸು’ ವಿಶೇಷ ಕಾರ್ಯಕ್ರಮದಲ್ಲಿ ಮನದಾಳದ ಮಾತು ಮೂಲಕ ಮಾತನಾಡಿದರು. ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟಪೂರ್ವಾಧ್ಯಕ್ಷ ದಿನೇಶ್ ಪೂಜಾರಿ ಬೀರೊಟ್ಟು, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್ ಮೊದಲಾದವರು ವೇದಿಕೆಯಲ್ಲಿದ್ದರು.

ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಪ್ರಶಾಂತ್ ಪೂಜಾರಿ, ಕೋಶಾಧಿಕಾರಿ ಪ್ರದೀಪ್ ಸುವರ್ಣ, ಸದಸ್ಯರಾದ ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಪದ್ಮಶ್ರೀ ಪೂಜಾರಿ, ವೀಣಾ ಪೂಜಾರಿ, ಪುಷ್ಪ ಕುಲಾಲ್, ಹರೀಶ್ ಗೋಳಿಕಟ್ಟೆ, ಹರಿಣಾಕ್ಷಿ ಪೂಜಾರಿ, ಅನ್ನಪೂರ್ಣ ಕಾಮತ್, ಶಾಂತರಾಮ್ ಕುಲಾಲ್, ಯೋಗೀಶ್ ಆಚಾರ್ಯ, ಸುಭಾಸ್ ಕೆಮ್ಮಣ್ಣು, ಕಿರಣ್ ಪೂಜಾರಿ, ಶ್ರೀಕಾಂತ್ ಆಚಾರ್ಯ, ಅಭಿಷೇಕ್ ಕುಲಾಲ್, ಅವಿನಾಶ್ ಪೂಜಾರಿ, ಯಶವಂತ್ ಕುಲಾಲ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!