Monday, February 24, 2025
Monday, February 24, 2025

ಕಲ್ಯಾಣಪುರ: ವನಮಹೋತ್ಸವ

ಕಲ್ಯಾಣಪುರ: ವನಮಹೋತ್ಸವ

Date:

ಉಡುಪಿ, ಆ.8: ಕಲ್ಯಾಣಪುರ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ಸಯನ್ಸ್ ಮತ್ತು ಇಕೊ ಕ್ಲಬ್ ಜತೆ ರೋಟರಿ ಉಡುಪಿ ಜಂಟಿ ಆಶ್ರಯದಲ್ಲಿ ರೋಟರಿ ಉಡುಪಿ ವತಿಯಿಂದ ಮಾಡಿರುವ ಮಿಯಾವಾಕಿ ಕಾಡಿನ ಬಳಿ ರೋಟರಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಿದರು. ಕಾಲೇಜಿನ ಪ್ರಾಂಶುಪಾಲೆ ಸವಿತಾ ಕುಮಾರಿ ವಿದ್ಯಾರ್ಥಿಗಳಿಗೆ ವನಮಹೋತ್ಸವದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿ ರೋಟರಿ ಉಡುಪಿಯ ಸಹಕಾರವನ್ನು ಶ್ಲಾಘಿಸಿದರು.

ವಿದ್ಯಾರ್ಥಿ ಚಂದನ ಸ್ವಾಗತಿಸಿದರು. ರೋಟರಿ ಅಧ್ಯಕ್ಷ ಗುರುರಾಜ ಭಟ್ ಪ್ಲಾಸ್ಟಿಕ್ ಬಳಕೆ, ಅದರ ಅಸಮರ್ಪಕ ವಿಲೇವಾರಿಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳು ಮತ್ತು ವಿದ್ಯಾರ್ಥಿಗಳು ಈ ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಇಕೋ ಕ್ಲಬ್ ನ ಸಂಚಾಲಕಿ ಲೊಲೆಟಾ ಡಿಸೋಜ, ಸಹ ಸಂಚಾಲಕಿ ರೋಷನಿ ಸೋನ್ಸ್, ಕಾರ್ಯದರ್ಶಿ ವೈಷ್ಣವಿ ಆಚಾರ್ಯ ಉಪಸ್ಥಿತರಿದ್ದರು. ರಘುಪತಿ ಉಪಾಧ್ಯ, ರಾಮಚಂದ್ರ ಉಪಾಧ್ಯಾಯ, ಹೇಮಂತಕಾಂತ, ಶುಭಲಕ್ಷ್ಮಿ ಭಟ್ ಮತ್ತು ಸಾದನಾ ಮುಂಡ್ಕೂರ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!