Saturday, September 21, 2024
Saturday, September 21, 2024

ಕಲ್ಯಾಣಪುರ: ವನಮಹೋತ್ಸವ

ಕಲ್ಯಾಣಪುರ: ವನಮಹೋತ್ಸವ

Date:

ಉಡುಪಿ, ಆ.8: ಕಲ್ಯಾಣಪುರ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ಸಯನ್ಸ್ ಮತ್ತು ಇಕೊ ಕ್ಲಬ್ ಜತೆ ರೋಟರಿ ಉಡುಪಿ ಜಂಟಿ ಆಶ್ರಯದಲ್ಲಿ ರೋಟರಿ ಉಡುಪಿ ವತಿಯಿಂದ ಮಾಡಿರುವ ಮಿಯಾವಾಕಿ ಕಾಡಿನ ಬಳಿ ರೋಟರಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಿದರು. ಕಾಲೇಜಿನ ಪ್ರಾಂಶುಪಾಲೆ ಸವಿತಾ ಕುಮಾರಿ ವಿದ್ಯಾರ್ಥಿಗಳಿಗೆ ವನಮಹೋತ್ಸವದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿ ರೋಟರಿ ಉಡುಪಿಯ ಸಹಕಾರವನ್ನು ಶ್ಲಾಘಿಸಿದರು.

ವಿದ್ಯಾರ್ಥಿ ಚಂದನ ಸ್ವಾಗತಿಸಿದರು. ರೋಟರಿ ಅಧ್ಯಕ್ಷ ಗುರುರಾಜ ಭಟ್ ಪ್ಲಾಸ್ಟಿಕ್ ಬಳಕೆ, ಅದರ ಅಸಮರ್ಪಕ ವಿಲೇವಾರಿಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳು ಮತ್ತು ವಿದ್ಯಾರ್ಥಿಗಳು ಈ ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಇಕೋ ಕ್ಲಬ್ ನ ಸಂಚಾಲಕಿ ಲೊಲೆಟಾ ಡಿಸೋಜ, ಸಹ ಸಂಚಾಲಕಿ ರೋಷನಿ ಸೋನ್ಸ್, ಕಾರ್ಯದರ್ಶಿ ವೈಷ್ಣವಿ ಆಚಾರ್ಯ ಉಪಸ್ಥಿತರಿದ್ದರು. ರಘುಪತಿ ಉಪಾಧ್ಯ, ರಾಮಚಂದ್ರ ಉಪಾಧ್ಯಾಯ, ಹೇಮಂತಕಾಂತ, ಶುಭಲಕ್ಷ್ಮಿ ಭಟ್ ಮತ್ತು ಸಾದನಾ ಮುಂಡ್ಕೂರ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!