Home ಸುದ್ಧಿಗಳು ಪ್ರಾದೇಶಿಕ ಮಣಿಪಾಲ: ವನಮಹೋತ್ಸವ ಕಾರ್ಯಕ್ರಮ

ಮಣಿಪಾಲ: ವನಮಹೋತ್ಸವ ಕಾರ್ಯಕ್ರಮ

987
0

ಉಡುಪಿ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಠ, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಮತ್ತು ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ ಇದರ ವತಿಯಿಂದ ಆದಿತ್ಯವಾರ ಬಿವಿಟಿ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ನಮ್ಮ ವರ್ತನೆ ಪರಿಸರಕ್ಕೆ ಪೂರಕವಾಗಿದ್ದರೆ ಮಾತ್ರ ಸುಸ್ಥಿರ ಅಭಿವೃದ್ಧಿ ಸಾಧ್ಯವಾಗುತ್ತದೆ. ಗಿಡಗಳನ್ನು ಬೆಳೆಸಿ ರಕ್ಷಣೆ ಮಾಡುವುದರಿಂದ ಪರಿಸರ ಮತ್ತು ಆರೋಗ್ಯ ಉತ್ತಮವಾಗಲು ಸಾಧ್ಯ ಎಂದರು.

ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಡಾ. ರಾಮಚಂದ್ರ ಕಾಮತ್ ಪರಿಸರ ರಕ್ಷಣೆ ಮತ್ತು ಮುಂದಿನ ಯೋಜನೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಸೆಲ್ಕೋ ಸೋಲಾರ್ ಎಜಿಎಂ ಜಗದೀಶ್ ಪೈ, ಡಾ. ವಿದ್ಯಾಧರ ಶೆಟ್ಟಿ, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು, ಬಿವಿಟಿ ಕಾರ್ಯನಿರ್ವಾಹಕ ಮನೋಹರ್ ಕಟ್ಗೇರಿ, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.