Home ಸುದ್ಧಿಗಳು ಪ್ರಾದೇಶಿಕ ಲಸಿಕೆ ಪಡೆದು ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಿ: ಅಪರ ಜಿಲ್ಲಾಧಿಕಾರಿ

ಲಸಿಕೆ ಪಡೆದು ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಿ: ಅಪರ ಜಿಲ್ಲಾಧಿಕಾರಿ

665
0

ಹಂತಹಂತವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕಾರ್ಯ ಆರೋಗ್ಯ ಇಲಾಖೆಯಿಂದ ನಡೆಯುತ್ತಿದೆ ಎಂದು ​ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು. ​

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ​ಉಡುಪಿ ವಲಯದ ಸದಸ್ಯರಿಗೆ ​ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ ಏರ್ಪಡಿಸಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಲಸಿಕೆ ಪಡೆದುಕೊಂಡರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯವಾಗುವುದು. ಲಸಿಕೆ ಲಭ್ಯವಿರುವ ಸಮಯದಲ್ಲಿ ಪ್ರತಿಯೊಬ್ಬರೂ ಲಸಿಕೆ ಪಡೆದು ಕೋವಿಡ್ ನಿಯಂತ್ರಣಕ್ಕಾಗಿ ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕರೆ ನೀಡಿದರು.

ಈ‌​ ​ಸಂದರ್ಭದಲ್ಲಿ ​ಉಡುಪಿ ವಲಯ ಅಧ್ಯಕ್ಷ ​ಪ್ರಕಾಶ್ ಕೊಡಂಕೂರ್, ಕಾರ್ಯದರ್ಶಿ ​ಸುಕೇಶ್ ಅಮೀನ್,​ ಜಿಲ್ಲಾಧ್ಯಕ್ಷ ಕರಂದಾಡಿ ಶ್ರೀಧರ್ ಶೆಟ್ಟಿಗಾರ್, ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ್ ಕೊಡವೂರು, ಆಸ್ಟ್ರೋ ಮೋಹನ್, ಭಾರತಿ ಭಾಸ್ಕರ್, ಮಹೇಶ್ ಸುವರ್ಣ, ರಂಜಿತ್ ಕೊಡವೂರು, ರಾಘವೇಂದ್ರ ನಾಯಕ್, ಮಿತ್ರ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.