Home ಸುದ್ಧಿಗಳು ಪ್ರಾದೇಶಿಕ ವಯಸ್ಸಾಗುವುದು ಸಹಜ ಪ್ರಕ್ರಿಯೆ, ಅದು ಸಮಸ್ಯೆಯಲ್ಲ: ಡಾ. ಸಂಪತ್ ಕುಮಾರ್

ವಯಸ್ಸಾಗುವುದು ಸಹಜ ಪ್ರಕ್ರಿಯೆ, ಅದು ಸಮಸ್ಯೆಯಲ್ಲ: ಡಾ. ಸಂಪತ್ ಕುಮಾರ್

ತೆಂಕನಿಡಿಯೂರು ಕಾಲೇಜಿನಲ್ಲಿ ಸಮಾಜಶಾಸ್ತ್ರ ರಾಷ್ಟ್ರ‍ೀಯ ವಿಚಾರ ಸಂಕಿರಣ

427
0

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗ ಮತ್ತು ಕರ್ನಾಟಕ ಸಮಾಜಶಾಸ್ತ್ರ ಸಂಘದ ಜಂಟಿ ಆಶ್ರಯದಲ್ಲಿ ‘ಸೋಶಿಯಾಲಜಿ ಆಫ್ ಏಜಿಂಗ್ ಥಿಯರೆಟಿಕಲ್ ಅಪ್ರೋಚಸ್ ಆಂಡ್ ಕರಂಟ್ ರೀಸರ್ಚ್ ಟ್ರೆಂಡ್ಸ್’ ಎಂಬ ವಿಷಯದ ಕುರಿತು ರಾಷ್ಟ್ರ‍ೀಯ ವಿಚಾರ ಸಂಕಿರಣ ನಡೆಯಿತು.

ಕುವೆಂಪು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ ಹಾಗೂ ಕರ್ನಾಟಕ ಸಮಾಜಶಾಸ್ತ್ರ ಸಂಘದ ಅಧ್ಯಕ್ಷರಾದ ಪ್ರೊ. ಗುರುಲಿಂಗಯ್ಯರವರು ಉದ್ಘಾಟನೆ ನೆರವೇರಿಸಿದರು. ತಮಿಳುನಾಡಿನ ಭಾರತೀಯಾರ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಎಸ್. ಸಂಪತ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಉಪನ್ಯಾಸ ನೀಡಿದರು.

ಹಿರಿಯ ನಾಗರೀಕರ ರಾಷ್ಟ್ರ‍ೀಯ ನೀತಿಯ ಬಗ್ಗೆ ಬೆಳಕನ್ನು ಚೆಲ್ಲುತ್ತಾ, 2026ರಲ್ಲಿ ಭಾರತದ ಒಟ್ಟು ಜನಸಂಖ್ಯೆಯ ಶೇ 12.17 ರಷ್ಟು 60 ವಯಸ್ಸು ದಾಟಿದವರು ಇರಲಿದ್ದಾರೆ. ಹಲವಾರು ವರ್ಷಗಳ ಹಿಂದೆ ಆಧುನಿಕತೆಯ ಮೊದಲು ಹಿರಿಯ ನಾಗರೀಕರನ್ನು ಒಳ್ಳೆಯ ರೀತಿ ನೋಡಿಕೊಳ್ಳಲಾಗುತ್ತಿತ್ತು. ಆದರೆ ಆಧುನಿಕತೆಯ ಅಲೆಯ ಪ್ರಭಾವದಿಂದ ಅವರ ಬಗ್ಗೆ ನಿರ್ಲಕ್ಷ್ಯ ಧೋರಣೆ ಹೆಚ್ಚುತ್ತಿರುವುದು ಬೇಸರದ ಸಂಗತಿ. ಇದರಿಂದ ಹಿರಿಯ ನಾಗರೀಕರು ಭಾವನಾತ್ಮಕ, ದೈಹಿಕ, ಭೌತಿಕ ಹಾಗೂ ಆರ್ಥಿಕ ಅಭದ್ರತೆಗೆ ಒಳಗಾಗುವ ಸಾಧ್ಯತೆಗಳಿವೆ.

ವಯಸ್ಸಾಗುವುದು ಒಂದು ಸಹಜ ಪ್ರಕ್ರಿಯೆ, ಅದು ಸಮಸ್ಯೆಯಲ್ಲ ಎಂದು ಅರ್ಥೈಸಿಕೊಳ್ಳುವ ಅಗತ್ಯತೆಯಿದೆ ಎಂದು ಇದಕ್ಕೆ ಸಂಬಂಧಿಸಿದ ಹಲವಾರು ಸಿದ್ಧಾಂತಗಳನ್ನು ವಿವರಿಸಿ ಅವರು ಮಾತನಾಡಿದರು. ನೊಂದುಕೊಳ್ಳುವ ವಯಸ್ಸಾಗುವಿಕೆ ಬೇಡ, ಕ್ರಿಯಾಶೀಲ ವಯಸ್ಸಾಗುವಿಕೆ ಇಂದಿನ ಅಗತ್ಯ ಎಂದರು.

ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ಸಮಾಜಕಾರ್ಯ ವಿಭಾಗ ಸಂಯೋಜಕ ಡಾ. ದುಗ್ಗಪ್ಪ ಕಜೆಕಾರ್ ಅವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ರಾಘವ ನಾಯ್ಕ್ ಸ್ವಾಗತಿಸಿ, ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಉಮೇಶ್ ಪೈ ವಂದಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ರಾಜೇಶ್ ಉದ್ಘಾಟಕರನ್ನು ಪರಿಚಯಿಸಿದರು. ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಶರ್ಮಿಳಾ ಹಾರಾಡಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.