Tuesday, February 25, 2025
Tuesday, February 25, 2025

ಆಸರೆ ಚಾರಿಟೇಬಲ್ ಟ್ರಸ್ಟ್: ಉಚಿತ ವಿದ್ಯುತ್ ಸಂಪರ್ಕ

ಆಸರೆ ಚಾರಿಟೇಬಲ್ ಟ್ರಸ್ಟ್: ಉಚಿತ ವಿದ್ಯುತ್ ಸಂಪರ್ಕ

Date:

ಉಡುಪಿ: ನಗರದ ಕಕ್ಕುಂಜೆ ವಾರ್ಡಿನ ಲಕ್ಷ್ಮಣ ದೇವಾಡಿಗ ಮತ್ತು ಮೂಡುಪೆರಂಪಳ್ಳಿ ವಾರ್ಡಿನ ಶಾಂತಿ ಇವರ ಮನೆಗಳಿಗೆ ಆಸರೆ ಚಾರಿಟೇಬಲ್ ಟ್ರಸ್ಟ್( ರಿ) ಕಡಿಯಾಳಿ ವತಿಯಿಂದ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.
ಇದರ ಉದ್ಘಾಟನೆಯನ್ನು ಉಚಿತ ವಿದ್ಯುತ್ ಸಂಪರ್ಕದ ದಾನಿಗಳಾದ ಕಾರ್ಪೊರೇಷನ್ ಬ್ಯಾಂಕ್ ಎಂಪ್ಲಾಯಿಸ್ ಯೂನಿಯನ್ ಮಂಗಳೂರು ಉಪಾಧ್ಯಕ್ಷ ಕಾಮ್ರೇಡ್ ರಘುರಾಮ ಕೃಷ್ಣ ಬಲ್ಲಾಳ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಯೂನಿಯನ್ನ ಮಂಗಳೂರು ವಲಯದ ಸಹಕಾರ್ಯದರ್ಶಿ ಹೆರಲ್ಡ್ ಡಿಸೋಜ, ಉಡುಪಿ ವಲಯ ಕಾರ್ಯದರ್ಶಿ ಕಾಮ್ರೆಡ್ ನಾಗೇಶ್ ನಾಯಕ್, ಪ್ರದೇಶ ಕಾರ್ಯದರ್ಶಿ ಕಾಮ್ರೆಡ್ ಮನೋಜ್ ಕುಮಾರ್, ಕಾಮ್ರೆಡ್ ರಮೇಶ್ ಅವರು ಭಾಗವಹಿಸಿದ್ದರು.

ಆಸರೆ ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮತ್ತು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ ಸ್ವಾಗತಿಸಿ ಟ್ರಸ್ಟಿನ ಕೋಶಾಧಿಕಾರಿ ಸತೀಶ್ ಕುಲಾಲ್ ವಂದಿಸಿದರು. ಸ್ಥಳೀಯ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಗಿರಿಧರ ಆಚಾರ್ಯ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಿಶೋರ್ ಕರಂಬಳ್ಳಿ, ಮತ್ತು ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿಯ ಸದಸ್ಯರಾದ ರಾಕೇಶ್ ಜೋಗಿ ಉಪಸ್ಥಿತರಿದ್ದರು.

ಈ 2 ಮನೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಮಹಿಷಮರ್ದಿನಿ ಎಲೆಕ್ಟ್ರಿಕಲ್ ನ ಅಶ್ವತ್ಥ ದೇವಾಡಿಗ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!