Monday, February 24, 2025
Monday, February 24, 2025

ಆಸರೆ ಚಾರಿಟೇಬಲ್ ಟ್ರಸ್ಟ್: ಶೈಕ್ಷಣಿಕ ದತ್ತಿ ನಿಧಿ ವಿತರಣೆ

ಆಸರೆ ಚಾರಿಟೇಬಲ್ ಟ್ರಸ್ಟ್: ಶೈಕ್ಷಣಿಕ ದತ್ತಿ ನಿಧಿ ವಿತರಣೆ

Date:

ಉಡುಪಿ: ಆಸರೆ ಚಾರಿಟೇಬಲ್ ಟ್ರಸ್ಟ್ (ರಿ) ಕಡಿಯಾಳಿ, ಉಡುಪಿ ಇದರ ನೇತೃತ್ವದಲ್ಲಿ ತಂದೆ ತಾಯಿ ಕಳೆದುಕೊಂಡ 25 ಅವಕಾಶ ವಂಚಿತ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನವಾಗಿ ವರ್ಷಂಪ್ರತಿ ನೀಡುವ ದತ್ತಿ ನಿಧಿಯನ್ನು ಕಡಿಯಾಳಿ ಕಾತ್ಯಾಯನಿ ಮಂಟಪದಲ್ಲಿ ನೀಡಲಾಯಿತು.

ಸಮಾರಂಭದ ಮುಖ್ಯ ಅತಿಥಿಯಾಗಿ ಬಾಳಿಗಾ ಫಿಶ್ ನೆಟ್ ನ ಮಾಲೀಕರಾದ ನಿಖಿಲ್ ಬಾಳಿಗಾ ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಆಸರೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಪ. ವಸಂತ್ ಭಟ್ ವಹಿಸಿದ್ದರು. ಉಡುಪಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಸ್ಥಾಪಕ ಸದಸ್ಯರಾದ ತೋನ್ಸೆ ದೇವದಾಸ್ ಪೈ ಮತ್ತು ಸಮಿತಿಯ ಸದಸ್ಯರಾದ ಹೆಚ್. ಸುದೀರ್ ಭಟ್ ರಿಗೆ ಗಣೇಶೋತ್ಸವ ಸಮಿತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಆಸರೆ ಚಾರಿಟೇಬಲ್ ಟ್ರಸ್ಟ್ ಈಗಾಗಲೇ ಉಡುಪಿ ನಗರದ 92 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಿದ್ದು ಇನ್ನು ಹಲವರ ಮನೆಗಳಿಗೆ ಶೀಘ್ರದಲ್ಲೇ ಉಚಿತ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಹೇಳಿದರು. ಬಸ್ ನಿಲ್ದಾಣಗಳಲ್ಲಿ, ದೇವಸ್ಥಾನದ ಜಗಲಿಗಳಲ್ಲಿ ದಿನಕಳೆಯುವ ಆಧಾರ್ ಕಾರ್ಡ್ ರಹಿತ ನಿರ್ಗತಿಕ ಕೂಲಿ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಆಸರೆ ಚಾರಿಟೇಬಲ್ ಟ್ರಸ್ಟ್ ಜಿಲ್ಲಾಡಳಿತಕ್ಕೆ ಸಹಕಾರ ನೀಡಲಿದೆ ಎಂದರು.

ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಎಂ. ಅಂಚನ್, ಕಡಿಯಾಳಿ ನಗರಸಭಾ ಸದಸ್ಯರಾದ ಗೀತಾ ಶೇಟ್ ಉಪಸ್ಥಿತರಿದ್ದರು. ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕೋಶಾಧಿಕಾರಿ ಎಂ. ವಲ್ಲಬ್ ಭಟ್ ಸ್ವಾಗತಿಸಿ, ಆಸರೆ ಚಾರಿಟೇಬಲ್ ಟ್ರಸ್ಟ್ ನ ಕೋಶಾಧಿಕಾರಿ ಸತೀಶ್ ಕುಲಾಲ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!