Sunday, February 23, 2025
Sunday, February 23, 2025

ಸಣ್ಣ ಪುಟ್ಟ ಅಂಗಡಿಗಳಿಗೂ ಪರ್ಯಾಯ ದಿನಗಳಲ್ಲಿ ತೆರೆಯಲು ಅವಕಾಶ ನೀಡಿ: ಅಶೋಕ್ ಕುಮಾರ್ ಕೊಡವೂರು

ಸಣ್ಣ ಪುಟ್ಟ ಅಂಗಡಿಗಳಿಗೂ ಪರ್ಯಾಯ ದಿನಗಳಲ್ಲಿ ತೆರೆಯಲು ಅವಕಾಶ ನೀಡಿ: ಅಶೋಕ್ ಕುಮಾರ್ ಕೊಡವೂರು

Date:

ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕ್ರಮ ಶ್ಲಾಘನೀಯವಾದರೂ ಕಳೆದ 50 ದಿನಗಳಿಂದ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಯಾದ ನಿರ್ಬಂಧಗಳಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸುವುದು ಕಷ್ಟವಾಗಿದೆ. ಬಟ್ಟೆ ಮಳಿಗೆಗಳಲ್ಲಿ ಹಾಗೂ ಇನ್ನಿತರ ಅಂಗಡಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ನೌಕರಿಯಿಲ್ಲದೆ ದಿನನಿತ್ಯದ ಅಗತ್ಯಗಳನ್ನು ಪೂರೈಸುವುದು ಕಷ್ಟಕರವಾಗಿದೆ. ಸಾಮಾನ್ಯ ಜನರನ್ನೂ ಗಮನದಲ್ಲಿಟ್ಟುಕೊಂಡು ಈಗಾಗಲೇ ಕೆಲವು ವ್ಯಾಪಾರಗಳಿಗೆ ವಿನಾಯಿತಿ ನೀಡಲಾಗಿದ್ದು ಇನ್ನುಳಿದ ಸಣ್ಣ ಪುಟ್ಟ ಅಂಗಡಿ ಮಾಲಿಕರು ವ್ಯಾಪಾರ ಸ್ಥಗಿತಗೊಂಡು ಯಾವ ರೀತಿ ಜೀವನ ನಿರ್ವಹಣೆ ಮಾಡಬೇಕೆಂದು ತೋಚದ ಸ್ಥಿತಿಯಲ್ಲಿದ್ದಾರೆ. ಅವರು ನೆಮ್ಮದಿಯಿಂದ ಜೀವನ ನಡೆಸುವಂತಾಗುವ ನಿಟ್ಟಿನಲ್ಲಿ ಆಯ್ದ ಇತರ ಅಗತ್ಯ ವಸ್ತುಗಳ ಅಂಗಡಿಗಳಿಗೆ ಪರ್ಯಾಯ ದಿನಗಳಂತೆ ತೆರೆಯಲು ಅನುಮತಿ ನೀಡಿ ದಿನನಿತ್ಯದ ವ್ಯಾಪಾರವನ್ನೇ ಅವಲಂಬಿತ ಕುಟುಂಬಗಳಿಗೆ ಅನುಕೂಲವಾಗುವಂತೆ ವಿನಾಯ್ತಿ ನೀಡಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!