Monday, February 24, 2025
Monday, February 24, 2025

ಉಡುಪಿ ಚೈಲ್ಡ್ ಲೈನ್ 1098 ವತಿಯಿಂದ ಅರಿವು ಕಾರ್ಯಕ್ರಮ

ಉಡುಪಿ ಚೈಲ್ಡ್ ಲೈನ್ 1098 ವತಿಯಿಂದ ಅರಿವು ಕಾರ್ಯಕ್ರಮ

Date:

ಮಲ್ಪೆ: ಉಡುಪಿ ಚೈಲ್ಡ್ ಲೈನ್ -1098 ವತಿಯಿಂದ ಲಕ್ಷ್ಮೀನಗರ ಅಂಗನವಾಡಿ ಕೇಂದ್ರದಲ್ಲಿ ಹದಿಹರೆಯದ ಹೆಣ್ಣು ಮಕ್ಕಳಿಗೆ ಮಕ್ಕಳ ರಕ್ಷಣಾ ವ್ಯವಸ್ಥೆಗಳು, ಪೋಕ್ಸೋ ಇನ್ನಿತರ ಕಾಯಿದೆಗಳು ಮತ್ತು ಹದಿಹರೆಯದ ಮಕ್ಕಳ ಸಮಸ್ಯೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಚೈಲ್ಡ್ ಲೈನ್ -1098 ಆಪ್ತಸಮಾಲೋಚಕಿ ಜ್ಯೋತಿಯವರು ಚೈಲ್ಡ್ ಲೈನ್-1098 ಸೇವೆಗಳ ಕುರಿತು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕರಾವಳಿ ಕಾವಲು ಪಡೆಯ ಎಸ್.ಐ. ಮುಕ್ತಾಬಾಯಿ ಮಾತನಾಡುತ್ತಾ, ಹೆಣ್ಣು ಮಕ್ಕಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸುವ ಸಂದರ್ಭದಲ್ಲಿ ಅಡ್ಡ ದಾರಿಯನ್ನು ತುಳಿಯಬಾರದು. ಅಲ್ಲದೇ ಅವಶ್ಯಕತೆಗಿಂತ ಹೆಚ್ಚಿನ ಮೊಬೈಲ್ ಬಳಕೆಯಿಂದ ಆಗುವ ತೊಂದರೆಗಳ ಕುರಿತು ಮಾಹಿತಿ ನೀಡಿದರು. ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಕೂಡ ಮಿತಿಯನ್ನು ಹಾಕುವಂತೆ ಅವರು ಸಲಹೆ ನೀಡಿದರು. ಕಲಿಯುವ ಸಂದರ್ಭದಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಮಾರಕವಾಗಿರುವ ವಿಚಾರಗಳಿಂದ ದೂರವಿರುವಂತೆ ತಿಳಿಸಿದರು. ಯಾವುದೇ ರೀತಿಯಾದ ಸಮಸ್ಯೆಯಾದಲ್ಲಿ ಪೊಲೀಸ್ ಅಥವಾ ಚೈಲ್ಡ್ ಲೈನ್ 1098 ಇದಕ್ಕೆ ಕರೆ ಮಾಡಿ ಸಹಾಯವನ್ನು ಪಡೆಯುವಂತೆ ಕರೆ ನೀಡಿದರು.

ಉಡುಪಿ ಚೈಲ್ಡ್ ಲೈನ್-1098 ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಮಾತನಾಡುತ್ತಾ, ಹೆಣ್ಣುಮಕ್ಕಳು ತಮ್ಮ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಉತ್ತಮವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ತಿಳಿಸಿದರು. ಅಲ್ಲದೇ ಒಂದು ನಿಶ್ಚಿತ ಗುರಿಯನ್ನು ತಲುಪುವ ಹಾದಿಯಲ್ಲಿ ತಪ್ಪು ದಾರಿ ತುಳಿಯಬಾರದು ಎಂದರು.

ನಂತರ ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿನಿಯೋರ್ವಳಿಗೆ ಸ್ಥಳೀಯ ದಾನಿಗಳಾದ ಅಭಯ್ ಶ್ರೀನಗರ ಇವರ ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಉಡುಪಿ ಚೈಲ್ಡ್ ಲೈನ್ -1098 ವತಿಯಿಂದ ಮಾಸ್ಕ್ ವಿತರಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯವರಾದ ಸುಮಂಗಲ, ಚೈಲ್ಡ್ ಲೈನ್ ಸಹ ನಿರ್ದೇಶಕಿ ಸುಹಾನಿ ಕಾಮತ್, ಚೈಲ್ಡ್ ಲೈನ್ ಸಿಬ್ಬಂದಿ ನಯನ, ಸ್ಥಳೀಯ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

ಚೈಲ್ಡ್ ಲೈನ್ ನಿರ್ದೇಶಕ ಗುರುರಾಜ್ ಭಟ್ ಸ್ವಾಗತಿಸಿ, ಚೈಲ್ಡ್ ಲೈನ್ ಸಿಬ್ಬಂದಿ ಪ್ರಮೋದ್ ನಿರೂಪಿಸಿ, ವೃಶಾಕ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!