Saturday, May 9, 2026
Saturday, May 9, 2026

ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ನವೀಕೃತ ಸಭಾಭವನ ಉದ್ಘಾಟನೆ

ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ನವೀಕೃತ ಸಭಾಭವನ ಉದ್ಘಾಟನೆ

Date:

ಉಡುಪಿ: ಸರ್ಕಾರದ ಅನುದಾನವಿಲ್ಲದೇ ದಾನಿಗಳ ನೆರವಿನೊಂದಿಗೆ ಸಭಾಭವನದ ನಿರ್ಮಾಣ ಕಾರ್ಯವನ್ನು ಅತ್ಯಲ್ಪ ಅವಧಿಯಲ್ಲಿಯೇ ನವೀಕರಣಗೊಳಿಸಿರುವುದು ಪ್ರಶಂಸನೀಯ ಕಾರ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಅವರು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾಲಿಂಗೇಶ್ವರ ಸಭಾಭವನ ನವೀಕೃತ ಕಾಮಗಾರಿಯನ್ನು ಉದ್ಘಾಟಿಸಿ ಮಾತನಾಡಿದರು.

ನಗರದ ಮಧ್ಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಸಭಾಭವನವನ್ನು ದಾನಿಗಳು ಹಾಗೂ ಭಕ್ತರ ಸಹಕಾರದೊಂದಿಗೆ ಕಡಿಮೆ ಅವಧಿಯಲ್ಲಿಯೇ ಸುಂದರ, ಸುಸಜ್ಜಿತವಾಗ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಕಟ್ಟಡ ನವೀಕರಣ ಮಾಡಿರುವುದು ಮನೋಬಲ ಮತ್ತು ಪ್ರಬಲ ಇಚ್ಛಾಶಕ್ತಿಯನ್ನು ತೋರುತ್ತದೆ ಎಂದರು.

ಮುಂದಿನ ದಿನಗಳಲ್ಲಿ ಸಭಾಭವನದ ಬಳಕೆಯನ್ನು ಒಳ್ಳೆಯ ರೀತಿಯಲ್ಲಿ ಸಾರ್ವಜನಿಕರು ಬಳಕೆ ಮಾಡಿಕೊಳ್ಳುವುದರ ಜೊತೆಗೆ ಶುಚಿತ್ವಚಾಗಿ ಇಟ್ಟುಕೊಂಡು, ಪ್ರತೀ ಸೋಮವಾರ ನಡೆಯುವ ಅನ್ನಸಂತರ್ಪಣೆ ಕಾರ್ಯಕ್ಕೆ ಸಹ ಬಳಕೆ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ದಾನಿಗಳಾದ ಉಜ್ವಲ ಡೆವಲಪರ್ಸ್ನ ಪುರುಷೋತ್ತಮ ಶೆಟ್ಟಿ, ಅಮೃತಾ ಶೆಟ್ಟಿ ಹಾಗೂ ಗ್ರಾಸ್ ಲ್ಯಾಂಡ್ ಡೆವಲಪರ್ಸ್ನ ವಿನೀತ್ ಎಸ್. ಅಮೀನ್ ಬನ್ನಂಜೆ ಅವರನ್ನು ಸನ್ಮಾನಿಸಲಾಯಿತು.

ಎಂಜಿನಿಯರ್‌ಗಳಾದ ಪ್ರವೀಣ್ ಹೆಗ್ಡೆ, ಸುರೇಶ್ ನಾಣಯ್ಯ ಹಾಗೂ ದೇವಳದ ಆಡಳಿತಾಧಿಕಾರಿ ಡಾ. ರೋಶನ್ ಕುಮಾರ್ ಶೆಟ್ಟಿ ಅವರನ್ನು ಗೌರವಿಸಲಾಯಿತು.

ವಾಸುದೇವ ಭಟ್ ಪ್ರಾರ್ಥಿಸಿದರು. ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿತ್ಯಾನಂದ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

ಬೆಂಗಳೂರು, ಮೇ 8: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ "ಫೆಮಿನಾ ಮಿಸ್...

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ

ಸಿದ್ಧಾಪುರ, ಮೇ 8: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ...

ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

ಉಡುಪಿ, ಮೇ 8: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ...

ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ

ಉಡುಪಿ, ಮೇ 8: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ...
error: Content is protected !!