Monday, February 24, 2025
Monday, February 24, 2025

ಮಾ. 18- ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆರಾಟ ಮಹೋತ್ಸವ

ಮಾ. 18- ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆರಾಟ ಮಹೋತ್ಸವ

Date:

ಕಾರ್ಕಳ: ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಮಾರ್ಚ್ 14ರಿಂದ ಮಾರ್ಚ್ 21ರವರೆಗೆ ಜರಗಲಿದೆ. ಮಾರ್ಚ್ 14ರಂದು ಸೋಮವಾರ ಮೀನ ಸಂಕ್ರಮಣದಂದು ಬೆಳಿಗ್ಗೆ ಧ್ವಜಾರೋಹಣ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಬಿ.ಕೆ. ವಿಘ್ನೇಶ್ ಭಟ್ ಅವರ ನೇತೃತ್ವದಲ್ಲಿ ಧ್ವಜಾರೋಹಣಗೊಂಡು ಜಾತ್ರೋತ್ಸವ ಪ್ರಾರಂಭಗೊಂಡಿತು.

ಮಾರ್ಚ್ 15ರಂದು ಮಂಗಳವಾರ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆಯಿಂದ 3 ದಿನಗಳ ಕಾಲ ಅಬ್ಬನಡ್ಕ ಚೆಂಡು ಆರಂಭ, ರಾತ್ರಿ ಊರ ಆಯನ, ತಪ್ಪಂಗಾಯಿ ಬಲಿ ಮಾರ್ಚ್ 16ರಂದು ಬುಧವಾರ ಮಧ್ಯಾಹ್ನ
ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಮೂಡು ಸವಾರಿ ಉತ್ಸವ, ಅಬ್ಬನಡ್ಕದಲ್ಲಿ ಕಟ್ಟೆಪೂಜೆ, ಮಾರ್ಚ್ 17ರಂದು ಗುರುವಾರ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಸಿರಿಭೂತಬಲಿ, ಕವಾಟ ಬಂಧನ, ಶಯನಪೂಜೆ
ಮಾರ್ಚ್ 18ರಂದು ಶುಕ್ರವಾರ ಬೆಳಿಗ್ಗೆ ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಆರಾಟ ಮಹೋತ್ಸವ, ಅವಭೃತೋತ್ಸವ ಮಾಚ್ 19ರಂದು ಶನಿವಾರ ಬೆಳಿಗ್ಗೆ ಧ್ವಜಾವರೋಹಣ, ಮಾರ್ಚ್ 20ರಂದು ಆದಿತ್ಯವಾರ ಬೆಳಿಗ್ಗೆ ಶತರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಮಾರಿ ಸಮಾರಾಧನೆ, ಪಲ್ಲಪೂಜೆ, ಅನ್ನಸಂತರ್ಪಣೆ, ರಾತ್ರಿ ಮಹಾರಂಗಪೂಜೆ, ಮಾರ್ಚ್ 21ರಂದು ಸೋಮವಾರ ರಾತ್ರಿ ಪಂಚದೈವಗಳ ನೇಮೋತ್ಸವ ಜರಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೇ.ಮೂ.ಬಿ.ಎಂ.ಕೃಷ್ಣ ಭಟ್ ಮತ್ತು ವೇ.ಮೂ.ಬಿ.ಕೆ.ವಿಘ್ನೇಶ್ ಭಟ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...
error: Content is protected !!