Friday, September 20, 2024
Friday, September 20, 2024

ಬಿಲ್ಲಾಡಿ: ಕೋವಿಡ್ ಕಾರ್ಯಪಡೆ ಸಭೆ

ಬಿಲ್ಲಾಡಿ: ಕೋವಿಡ್ ಕಾರ್ಯಪಡೆ ಸಭೆ

Date:

ಬಿಲ್ಲಾಡಿ ಗ್ರಾಮ ಪಂಚಾಯತ್ ಇದರ ಕೋವಿಡ್ ಕಾರ್ಯಪಡೆ ಸಭೆ ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗ್ರಾಮದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾರ್ಯಸಭೆ ಕೈಗೊಂಡ ಕ್ರಮಗಳ ಕುರಿತು ವಿಸ್ತ್ರತ ಚರ್ಚೆ ನಡೆಸಿದರು. ಸೋಂಕು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಅನಗತ್ಯ ಸಂಚಾರಕ್ಕೆ ಸ್ವ ಇಚ್ಛೆಯಿಂದ ಕಡಿವಾಣ ಹಾಕಬೇಕು ಎಂದು ಸಚಿವರು ಹೇಳಿದರು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ನಿರೀಕ್ಷಕ ರಾಜು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎಚ್.ವಿ ಇಬ್ರಾಹಿಮ್ ಪುರ್, ಕೋಟ ಪೋಲಿಸ್ ಠಾಣಾಧಿಕಾರಿ ಸಂತೋಷ್, ಆವರ್ಸೆ ಪ್ರಾಥಮಿಕ ಕೇಂದ್ರ ವೈದ್ಯಾಧಿಕಾರಿ ಸವಿತಾ ಕುಂದರ್, ಅಭಿವೃದ್ಧಿ ಅಧಿಕಾರಿ ಪ್ರಶಾಂತ್, ಗ್ರಾಮ ಲೆಕ್ಕಿಗ ಶರತ್ ಶೆಟ್ಟಿ, ವಿಜಯ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್ ಶೆಟ್ಟಿ, ವೆಂಕಪ್ಪ ಕುಲಾಲ್, ಅಮರ್ ಶೆಟ್ಟಿ, ರವಿ ಆಚಾರ್ಯ, ಶಕುಂತಲಾ, ಸರಸ್ವತಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಕಾರ್ಯಪಡೆ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!