Friday, September 20, 2024
Friday, September 20, 2024

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ರಕ್ತದಾನ ಶಿಬಿರ

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ರಕ್ತದಾನ ಶಿಬಿರ

Date:

ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಮತ್ತು ಕೆ.ಎಂ.ಸಿ‌ ಆಸ್ಪತ್ರೆಯ ಸಹಕಾರದಲ್ಲಿ ಇಂದು ಡೊಂಗರಕೇರಿ ಕೆನರಾ ಪ್ರೌಢಶಾಲೆಯ ಭುವನೇಂದ್ರ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ 115 ನಾಗರಿಕರು ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸುವ ಸಂಕಲ್ಪ ತೊಟ್ಟರು.

130 ವರ್ಷಗಳ ಹಿನ್ನಲೆ ಇರುವ, ನಾಡಿನ ಸುಪ್ರಸಿದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಮುಖವಾಗಿರುವ ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸಿ.ಬಿ.ಎಸ್.ಸಿ ಯಿಂದ ಪ್ರೌಢಶಾಲೆ, ಕಾಲೇಜುಗಳನ್ನು ಒಳಗೊಂಡು ಇಂಜಿನಿಯರಿಂಗ್ ಶಿಕ್ಷಣ ವ್ಯವಸ್ಥೆಯೂ ಇದ್ದು, ನುರಿತ ಶಿಕ್ಷಕ ವರ್ಗವನ್ನು ಹೊಂದಿದೆ. ಪರಿಣಿತ ಆಡಳಿತ ಮಂಡಳಿ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವಿದ್ಯಾರ್ಥಿ ವೃಂದದ ಏಳಿಗೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಇದು ಮಕ್ಕಳ ಉಜ್ವಲ ಭವಿಷ್ಯಕ್ಕೆ ಭದ್ರ ತಳಪಾಯವನ್ನು ಹೊಂದಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಹನುಮಂತ ಕಾಮತ್, ನರಸಿಂಹ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ, ಕೆಎಂಸಿ ಆಸ್ಪತ್ರೆಯ ಡಾ. ಶ್ರೀರಾಮ್, ಆದರ್ಶ ಶೆಟ್ಟಿ ಎಕ್ಕಾರು, ಸೂರಜ್ ಬಜಿಲಕೇರಿ, ಎಂಎಂಪಿಯ ತುಕಾರಾಮ್ ಪ್ರಭು, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ರಿಜಿಸ್ಟ್ರಾರ್ ಗುರುದತ್ ಭಾಗವತ್, ಚಂದ್ರಕಾಂತ್ ಕಾಮತ್, ನರೇಶ್ ಪ್ರಭು, ಚೇತನ್ ಕಾಮತ್ ಹಾಗೂ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!