Thursday, September 26, 2024
Thursday, September 26, 2024

ಉಡುಪಿ: ಅಪ್ರಾಪ್ತ ಬಾಲಕನ ರಕ್ಷಣೆ

ಉಡುಪಿ: ಅಪ್ರಾಪ್ತ ಬಾಲಕನ ರಕ್ಷಣೆ

Date:

ಉಡುಪಿ: ಅಸಹಾಯಕ ಸ್ಥಿತಿಯಲ್ಲಿ ದಿನ ಕಳೆಯುತ್ತಿದ್ದ ಕೊಡಗು ಜಿಲ್ಲೆಯ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಮಕ್ಕಳ ರಕ್ಷಣಾ ಘಟಕ ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ರಕ್ಷಿಸಿರುವ ಘಟನೆಯು ಉಡುಪಿಯಲ್ಲಿ ನಡೆದಿದೆ. ಕಾರ್ಯಚರಣೆಯಲ್ಲಿ ಮಕ್ಕಳ ರಕ್ಷಣಾ ಘಟಕದ ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್, ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ಕೆ. ಬಾಲಗಂಗಾಧರ ರಾವ್ ಅವರು ಪಾಲ್ಗೊಂಡಿದ್ದರು.

ಬಾಲಕನು ಅತ್ತೂರು ಹಾರಂಗಿ ಇಲ್ಲಿಯ ಜ್ಞಾನಗಂಗಾ ರೆಸಿಡೆನ್ಸಿಯಲ್ ವಿದ್ಯಾ ಸಂಸ್ಥೆಯ 10 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಮನನೊಂದಿರುವ ಬಾಲಕನು ಬಟ್ಟೆ, ಬರೆ, ಪಠ್ಯಪುಸ್ತಕ, ಶಾಲೆಯ ದಾಖಲೆ ಪತ್ರಗಳೊಂದಿಗೆ ಮನೆ ಬಿಟ್ಟು ಬಂದಿದ್ದು, ಉಡುಪಿ ನಗರದಲ್ಲಿ ಉದ್ಯೋಗ ಅರಸುತ್ತಿರುವಾಗ, ನಾಗರಿಕ ಸಮಿತಿಯ ಕಾರ್ಯಕರ್ತರಿಗೆ, ಬಾಲಕ ಅಸಹಾಯಕ ಸ್ಥಿತಿಯಲ್ಲಿರುವ ವಿಷಯವು ತಿಳಿದುಬಂದಿದೆ.

ಮಕ್ಕಳ ರಕ್ಷಣಾ ಘಟಕದ ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್ ಅವರು ಮನೊಂದಿರುವ ಬಾಲಕನಿಗೆ ಸಾಂತ್ವನ ಹೇಳಿ ಆಪ್ತಸಮಾಲೋಚನೆ ನಡೆಸಿದ್ದಾರೆ. ನಂತರ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರ ಮಾರ್ಗದರ್ಶನದಂತೆ, ಬಾಲಕನಿಗೆ ಶಂಕರಪುರದ ವಿಶ್ವಾಸದ ಮನೆ ಪುರ್ನವಸತಿ ಕೇಂದ್ರದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಲಾಗಿದೆ.

ಘಟನೆಯ ಕುರಿತು ಪರಿವೀಕ್ಷಣಾಧಿಕಾರಿ ಅವರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ. ಬಾಲಕನ ಸಂಬಂಧಿಕರು ತುರ್ತಾಗಿ ಉಡುಪಿ ಮಕ್ಕಳ ರಕ್ಷಣಾ ಘಟಕ ಅಥವ ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2023-24ರಲ್ಲಿ ಅಂದಾಜು 3,322 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ

ನವದೆಹಲಿ, ಸೆ.25: 2023-24ರ ಅವಧಿಯಲ್ಲಿ ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯು...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು, ಸೆ.25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ...

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ- 2ನೇ ಹಂತದ ಮತದಾನ ಮುಕ್ತಾಯ

ನವದೆಹಲಿ, ಸೆ.25: ಜಮ್ಮು ಮತ್ತು ಕಾಶ್ಮೀರದ, ಆರು ಜಿಲ್ಲೆಗಳ 26 ವಿಧಾನಸಭಾ...

ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ

ಉಡುಪಿ, ಸೆ.25: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ...
error: Content is protected !!