Saturday, September 5, 2026
Saturday, September 5, 2026

ಉಡುಪಿ: ಅಪ್ರಾಪ್ತ ಬಾಲಕನ ರಕ್ಷಣೆ

ಉಡುಪಿ: ಅಪ್ರಾಪ್ತ ಬಾಲಕನ ರಕ್ಷಣೆ

Date:

ಉಡುಪಿ: ಅಸಹಾಯಕ ಸ್ಥಿತಿಯಲ್ಲಿ ದಿನ ಕಳೆಯುತ್ತಿದ್ದ ಕೊಡಗು ಜಿಲ್ಲೆಯ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಮಕ್ಕಳ ರಕ್ಷಣಾ ಘಟಕ ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ರಕ್ಷಿಸಿರುವ ಘಟನೆಯು ಉಡುಪಿಯಲ್ಲಿ ನಡೆದಿದೆ. ಕಾರ್ಯಚರಣೆಯಲ್ಲಿ ಮಕ್ಕಳ ರಕ್ಷಣಾ ಘಟಕದ ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್, ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ಕೆ. ಬಾಲಗಂಗಾಧರ ರಾವ್ ಅವರು ಪಾಲ್ಗೊಂಡಿದ್ದರು.

ಬಾಲಕನು ಅತ್ತೂರು ಹಾರಂಗಿ ಇಲ್ಲಿಯ ಜ್ಞಾನಗಂಗಾ ರೆಸಿಡೆನ್ಸಿಯಲ್ ವಿದ್ಯಾ ಸಂಸ್ಥೆಯ 10 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಮನನೊಂದಿರುವ ಬಾಲಕನು ಬಟ್ಟೆ, ಬರೆ, ಪಠ್ಯಪುಸ್ತಕ, ಶಾಲೆಯ ದಾಖಲೆ ಪತ್ರಗಳೊಂದಿಗೆ ಮನೆ ಬಿಟ್ಟು ಬಂದಿದ್ದು, ಉಡುಪಿ ನಗರದಲ್ಲಿ ಉದ್ಯೋಗ ಅರಸುತ್ತಿರುವಾಗ, ನಾಗರಿಕ ಸಮಿತಿಯ ಕಾರ್ಯಕರ್ತರಿಗೆ, ಬಾಲಕ ಅಸಹಾಯಕ ಸ್ಥಿತಿಯಲ್ಲಿರುವ ವಿಷಯವು ತಿಳಿದುಬಂದಿದೆ.

ಮಕ್ಕಳ ರಕ್ಷಣಾ ಘಟಕದ ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್ ಅವರು ಮನೊಂದಿರುವ ಬಾಲಕನಿಗೆ ಸಾಂತ್ವನ ಹೇಳಿ ಆಪ್ತಸಮಾಲೋಚನೆ ನಡೆಸಿದ್ದಾರೆ. ನಂತರ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರ ಮಾರ್ಗದರ್ಶನದಂತೆ, ಬಾಲಕನಿಗೆ ಶಂಕರಪುರದ ವಿಶ್ವಾಸದ ಮನೆ ಪುರ್ನವಸತಿ ಕೇಂದ್ರದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಲಾಗಿದೆ.

ಘಟನೆಯ ಕುರಿತು ಪರಿವೀಕ್ಷಣಾಧಿಕಾರಿ ಅವರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ. ಬಾಲಕನ ಸಂಬಂಧಿಕರು ತುರ್ತಾಗಿ ಉಡುಪಿ ಮಕ್ಕಳ ರಕ್ಷಣಾ ಘಟಕ ಅಥವ ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!