Wednesday, February 26, 2025
Wednesday, February 26, 2025

ಸ್ತನ ಕ್ಯಾನ್ಸರ್ ಜಾಗೃತಿ

ಸ್ತನ ಕ್ಯಾನ್ಸರ್ ಜಾಗೃತಿ

Date:

ಕಾರ್ಕಳ: ಅಕ್ಟೋಬರ್ ತಿಂಗಳನ್ನು ವಿಶ್ವ ಸ್ತನ ಕ್ಯಾನ್ಸರ್ ಜಾಗೃತಿ ಮಾಸವಾಗಿ ಆಚರಿಸಲಾಗುತ್ತದೆ. ಇದರ ಪ್ರಯುಕ್ತ ಶಾರದಾ ಮಹಿಳಾ ಮಂಡಲ ಅನಂತಶಯನ ವತಿಯಿಂದ ಸದಸ್ಯೆಯರಿಗಾಗಿ ಮಾಹಿತಿ ಕಾರ್ಯಕ್ರಮವನ್ನು
ನಡೆಸಲಾಯಿತು.

ಕಾರ್ಕಳದ ಸರಕಾರಿ ಅಸ್ಪತ್ರೆಯ ರೇಡಯೊಲಜಿಸ್ಟ್ ಡಾ.ಅನಿತಾ ಪ್ರಭು ರವರು ಸ್ತನ ಕ್ಯಾನ್ಸರ್‌ ಆರಂಭದಲ್ಲಿ ಗುರುತಿಸುವುದು ಹೇಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. 40 ವರ್ಷದ ನಂತರ ಮಹಿಳೆಯರು ಕಡ್ಡಾಯವಾಗಿ ಮೆಮೊಗ್ರಾಫಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ, ರೋಗ ಪತ್ತೆ ಹಾಗೂ ಚಿಕಿತ್ಸೆ ಸುಲಭವೆಂದು ವೈದ್ಯರು ಕಿವಿಮಾತು ಹೇಳಿದರು.

ಶಾಂತಲಾ ಫಾಟಕ್, ಸೀಮಾ ಶೆಟ್ಟಿ, ಪ್ರಾರ್ಥಿಸಿದರು, ಅಧ್ಯಕ್ಷೆ ವಾರಿಜಾ ಕಾಮತ್ ಸ್ವಾಗತಿಸಿ, ಸಾಧನಾ ಅಶ್ರಿತ್ ವಂದಿಸಿದರು. ಉಮಾ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ವಿನಯಾ ಫಾಟಕ್ ರವರು ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಉಪಾಧ್ಯಕ್ಷೆ ಉಮಾ ಚಿಪ್ಳುಣಕರ್ ಹಾಗೂ ಕಾರ್ಯದರ್ಶಿ ಡಾ ಹರ್ಷಾ ಕಾಮತ್ ಉಪಸ್ಥಿತರಿದ್ದರು. ಮಂಡಳಿಯ ಸದಸ್ಯೆ, ಗೋಲ್ಡನ್ ವುಮೆನ್ಸ್ ಅಚೀವರ್ಸ್ ಅವಾರ್ಡ್ ವಿಜೇತೆ ಸಾಧನಾ ಜಿ. ಆಶ್ರೀತ್ ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!