Monday, February 24, 2025
Monday, February 24, 2025

ಅಭಿವೃದ್ಧಿಗೆ ಉತ್ತೇಜನ ನೀಡುವ ಬಜೆಟ್: ವೇದವ್ಯಾಸ ಕಾಮತ್

ಅಭಿವೃದ್ಧಿಗೆ ಉತ್ತೇಜನ ನೀಡುವ ಬಜೆಟ್: ವೇದವ್ಯಾಸ ಕಾಮತ್

Date:

ಮಂಗಳೂರು: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿದ 2022- 23ನೇ ಸಾಲಿನ ಕೇಂದ್ರ ಬಜೆಟ್ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡುವ ಜನಪರವಾದ ಬಜೆಟ್ ಆಗಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.

ಕೋವಿಡ್ ಸಂಕಷ್ಟದ ನಡುವೆಯೂ ಬಡ ಹಾಗೂ ಮಧ್ಯಮ ವರ್ಗಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಿದ್ದು, ಎಲ್ಲ ವರ್ಗದ ಜನರು ಮೆಚ್ಚುವಂತಹ ಬಜೆಟ್ ನೀಡಿದ್ದಾರೆ. ಬಡವರ ಬಗ್ಗೆ ವಿಶೇಷ ಕಾಳಜಿಯಿಂದ ಆವಾಸ್ ಯೋಜನೆಯಡಿ 80 ಲಕ್ಷ ಮನೆಗಳ ನಿರ್ಮಾಣ ಘೋಷಿಸಿದ್ದಾರೆ.

ಕೃಷಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸಾವಯವ ಕೃಷಿಯನ್ನು ಉತ್ತೇಜಿಸಲು ನಿರ್ಧರಿಸಿರುವುದು ಉತ್ತಮ ಬೆಳವಣಿಗೆ. ಅಲ್ಲದೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ರೈತರಿಗೆ ಹೆಚ್ಚಿನ ಸಹಕಾರ ದೊರೆಯಲಿದೆ. ಚಿನ್ನ, ವಜ್ರಾಭರಣ, ಕೃಷಿ ಉಪಕರಣ, ಮೊಬೈಲ್, ಬಟ್ಟೆ, ಚರ್ಮದ ಉತ್ಪನ್ನಗಳ ಮೇಲಿನ ತೆರಿಗೆ ಇಳಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಮೇಲಿನ ಹೊರೆಯನ್ನು ತಗ್ಗಿಸಿದ್ದಾರೆ ಎಂದು ಶಾಸಕ ಕಾಮತ್ ಮೆಚ್ಚುಗೆ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!