Saturday, September 21, 2024
Saturday, September 21, 2024

ಉಡುಪಿ: ತೆರೆದ ಮನೆ ಕಾರ್ಯಕ್ರಮ

ಉಡುಪಿ: ತೆರೆದ ಮನೆ ಕಾರ್ಯಕ್ರಮ

Date:

ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಚೈಲ್ಡ್ ಲೈನ್-1098 ಉಡುಪಿಯ ವತಿಯಿಂದ ತೆರೆದ ಮನೆ ಕಾರ್ಯಕ್ರಮ ಹನುಮಂತನಗರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸ್ಥಳೀಯ ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್‌ ಉದ್ಘಾಟನೆ ನೆರವೇರಿಸಿದರು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಬನ್ನಂಜೆ ಇಲ್ಲಿನ ವೈದ್ಯಾಧಿಕಾರಿ ಡಾ. ಹೇಮಂತ್‌, ಎಲ್ಲರೂ ಲಸಿಕೆಯನ್ನು ಕಡ್ಡಾಯವಾಗಿ ಪಡೆಯವಂತೆ ತಿಳಿಸಿದರು. ಶಿಕ್ಷಣ ಇಲಾಖೆಯ ಬಿ.ಆರ್. ಪಿ. ಲಕ್ಷ್ಮೀ, ಕಡ್ಡಾಯ ಶಿಕ್ಷಣ ಮಹತ್ವದ ಬಗ್ಗೆ ಮಾತನಾಡಿದರು.

ಮಹಿಳಾ ಪೋಲಿಸ್ ಠಾಣೆ ಉಡುಪಿಯ ಠಾಣಾಧಿಕಾರಿ ಫೇಮಿನಾ, ಮಕ್ಕಳಿಗೆ ಸಂಬಂಧಿಸಿದ ಕಾಯ್ದೆ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು. ಮಕ್ಕಳಿಗೆ ಯಾವುದೇ ರೀತಿಯಾದ ಸಮಸ್ಯೆಯಾದಲ್ಲಿ “ಚೈಲ್ಡ್ ಲೈನ್-1098” ಅಥವಾ ಪೋಲಿಸ್ ತುರ್ತು ದೂರವಾಣಿ ಸಂಖ್ಯೆ “112”ಗೆ ಕರೆ ಮಾಡುವಂತೆ ತಿಳಿಸಿದರು.

ರೋಟರಿ ಉಡುಪಿ ಅಧ್ಯಕ್ಷರಾದ ಹೇಮಂತ್‌ ಯು ಕಾಂತ್, ತೆರೆದ ಮನೆ ಮಕ್ಕಳಿಗೆ ತಮ್ಮ ಸಮಸ್ಯೆಗಳನ್ನು ಸರಕಾರಿ ಅಧಿಕಾರಿಗಳ ಮುಂದಿಡಲು ಉತ್ತಮ ವೇದಿಕೆಯಾಗಿದೆ ಎಂದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯುವರಾಜ್‌ರವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯಿಂದ ಮಕ್ಕಳಿಗೆ ಸಿಗುವಂತಹ ಸವಲತ್ತುಗಳನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅನ್ವಯ ಕನ್ನಡ ಸಮೂಹ ಗಾಯನ ನಡೆಯಿತು. ಚೈಲ್ಡ್ ಲೈನ್-1098 ವತಿಯಿಂದ ಮಾಸ್ಕ್ ವಿತರಿಸಲಾಯಿತು. ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಹಾಗೂ ರೋಟರಿ ಉಡುಪಿಯ ಸಹಕಾರದಿಂದ ನೀಡಿದ ಲ್ಯಾಪ್‌ಟಾಪ್‌ನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು.

ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ಸುಲೋಚನಾ ಕೊಡವೂರು, ಚೈಲ್ಡ್ ಲೈನ್-1098 ಉಡುಪಿಯ ಸಹ ನಿರ್ದೇಶಕ ಗುರುರಾಜ್ ಭಟ್, ಮಹಿಳಾ ಪೋಲಿಸ್ ಠಾಣೆ ಉಡುಪಿ ಸಿಬ್ಬಂದಿಗಳಾದ ಜ್ಯೋತಿ ನಾಯಕ್, ಅರುಣ ಟಿ.ಸಿ. ಮತ್ತು ಸಾವಿತ್ರಿ ಶಂಶಿ, ಅಂಗನವಾಡಿ ಮೇಲ್ವಿಚಾರಕಿ ಸಿಂಧು, ಅಂಗನವಾಡಿ ಕಾರ್ಯಕರ್ತೆಯವರಾದ ಸುಮತಿ, ಆಶಾ ಕಾರ್ಯಕರ್ತೆಯವರು, ಚೈಲ್ಡ್ ಲೈನ್-1098ಯ ಸ್ವಯಂ ಸೇವಕರಾದ ತಿಲೋತ್ತಮ ನಾಯಕ್, ಸ್ಥಳೀಯರು, ಮಕ್ಕಳು, ಶಿಕ್ಷಕ ವೃಂದದವರು ಮತ್ತು ಚೈಲ್ಡ್ ಲೈನ್-1098ನ ಸದಸ್ಯರು ಉಪಸ್ಥಿತರಿದ್ದರು.

ಚೈಲ್ಡ್ ಲೈನ್-1098 ಉಡುಪಿಯ ನಿರ್ದೇಶಕರಾದ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯಿನಿ ರಮಣಿ ವಂದಿಸಿದರು. ಚೈಲ್ಡ್ ಲೈನ್-1098 ಉಡುಪಿ ಆಪ್ತ ಸಮಾಲೋಚಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!